ಬೆಂಗಳೂರು: ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಹೆಗ್ಗನಹಳ್ಳಿ ಕ್ರಾಸ್ನ ಸಂಜೀವಿನಿ ಪುರದ ಸಾಗರ್ (19) ಹಾಗೂ ಅಂದ್ರಹಳ್ಳಿ ಮುಖ್ಯರಸ್ತೆಯ ಚೇತನ್ ವೃತ್ತದ ಬನಶಂಕರಿ ಜನರಲ್ ಸ್ಟೋರ್ ಬಳಿಯ ನಿವಾಸಿ ಗಣೇಶ್ (20) ಬಂಧಿತ ಆರೋಪಿಗಳು.
‘ಬಂಧಿತರು ಬ್ಯಾಡರಹಳ್ಳಿ, ಕಾಮಾಕ್ಷಿಪಾಳ್ಯ, ಯಶವಂತಪುರ, ಹಾಗೂ ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳವು ಮಾಡಿ ಗ್ಯಾರೇಜ್ಗಳಿಗೆ ಮಾರಾಟ ಮಾಡುತ್ತಿದ್ದರು. ಬಂಧಿತರಿಂದ ₹ 3.50 ಲಕ್ಷದ ಬೈಕ್ ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.