ADVERTISEMENT

ಬಿಜೆಪಿ ಮುಖಂಡನ ಮೇಲೆ ಹಲ್ಲೆ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2019, 20:21 IST
Last Updated 4 ಅಕ್ಟೋಬರ್ 2019, 20:21 IST

ಬೆಂಗಳೂರು: ಸಿ.ವಿ. ರಾಮನ್ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ ಲೋಕೇಶ್ ಮೇಲೆ ಗುರುವಾರ ರಾತ್ರಿ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ.

‘ಲಕ್ಷ್ಮಿಪುರ ನಿವಾಸಿಯಾಗಿರುವ ಲೋಕೇಶ್, ಶಾಸಕ ಎಸ್‌. ರಘು ಆಪ್ತ. ಘಟನೆಯಿಂದ ತೀವ್ರ ಗಾಯಗೊಂಡಿರುವ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಇಂದಿರಾನಗರ ಪೊಲೀಸರು ಹೇಳಿದರು.

‘ರಾತ್ರಿ 10.30ರ ಸುಮಾರಿಗೆ ಮನೆಗೆ ಬಂದಿದ್ದ ಲೋಕೇಶ್ ಕಾರಿನಿಂದ ಕೆಳಗೆ ಇಳಿಯುತ್ತಿದ್ದರು. ಹೆಲ್ಮೆಟ್ ಧರಿಸಿದ್ದ ದುಷ್ಕರ್ಮಿಗಳು ಚಾಕುವಿನಿಂದ ಬೆನ್ನು ಹಾಗೂ ಪಕ್ಕೆಲುಬಿಗೆ ಇರಿದಿದ್ದರು. ರಕ್ಷಣೆಗೆ ಹೋದ ಸಹೋದರ ಹರೀಶ್ ಮೇಲೂ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ’ ಎಂದು ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.