ಬೆಂಗಳೂರು:12 ಸ್ಥಾಯಿ ಸಮಿತಿ ಸದಸ್ಯರ ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆ ಅವಧಿ ಮುಗಿದಿದ್ದು, ಎಲ್ಲ ಸ್ಥಾಯಿ ಸಮಿತಿಗಳಿಗೆ ಬಿಜೆಪಿಯಿಂದ 6 ಜನ, ಕಾಂಗ್ರೆಸ್ ನಿಂದ 4 ಹಾಗೂಜೆಡಿಎಸ್ ನಿಂದ ಒಬ್ಬರು ಸದಸ್ಯರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಈ ವೇಳೆ ವಿಜಯನಗರದ ಮಹಾಲಕ್ಷ್ಮಿಅಸಮಾಧಾನಗೊಂಡು ಕಣ್ಣೀರು ಹಾಕಿದ್ದಾರೆ.
ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ನೀಡುವುದಾಗಿ ಬಿಜೆಪಿ ನಾಯಕರು ಭರವಸೆ ನೀಡಿದ್ದರು. ಆದರೆ, ಕೊನೆಯ ಕ್ಷಣದಲ್ಲಿ ಅವಕಾಶ ತಪ್ಪಿಸಲಾಗಿದೆ. ಕಳೆದ ಬಾರಿಯೂ ಉಪಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಾಗಿತ್ತು. ಆಗಲೂ ಕೊನೆಯ ಕ್ಷಣದಲ್ಲಿ ರಾಮ ಮೋಹನ್ ರಾಜ್ ಅವರನ್ನು ಉಪ ಮೇಯರ್ ಮಾಡಿದರು. ಈ ಬಾರಿ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ನೀಡುವುದಾಗಿಭರವಸೆ ನೀಡಿದ್ದರು. ಆದರೀಗ ಅಧ್ಯಕ್ಷ ಸ್ಥಾನವನ್ನೂ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.