ಬೆಂಗಳೂರು: ರಾಜಭವನ ರಸ್ತೆಯಲ್ಲಿರುವ ಕ್ಯಾಪಿಟಲ್ ಹೋಟೆಲ್ನಲ್ಲಿ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದ್ದು, ಹೋಟೆಲ್ ಹಾಗೂ ಅದರ ಸುತ್ತಲು 150 ಪೊಲೀಸರು ಭದ್ರತೆ ಕೈಗೊಂಡಿದ್ದಾರೆ.
ಸಭೆ ನಿಗದಿ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್, ಸ್ಥಳಕ್ಕೆ ಬಂದು ಭದ್ರತೆ ಕೈಗೊಳ್ಳುವ ಬಗ್ಗೆ ಎಸಿಪಿ ಹಾಗೂ ಇನ್ಸ್ಪೆಕ್ಟರ್ಗಳಿಗೆ ಸೂಚನೆ ನೀಡಿದರು. ಹೋಟೆಲ್ ವ್ಯವಸ್ಥಾಪಕರ ಜೊತೆ ಚರ್ಚಿಸಿ ಭದ್ರತೆ ಬಗ್ಗೆ ಚರ್ಚಿಸಿದರು. 150 ಸಿಬ್ಬಂದಿಗಳನ್ನು ಹೋಟೆಲ್ ಬಳಿ ಕರೆಸಿಕೊಂಡ ಡಿಸಿಪಿ, ಭದ್ರತೆಗೆ ನಿಯೋಜಿಸಿದರು.
ಹೋಟೆಲ್ ಪ್ರವೇಶ ದ್ವಾರ ಹಾಗೂ ಸುತ್ತಮುತ್ತಲ ಪ್ರತಿಯೊಂದು ಕಡೆಯೂ ಪೊಲೀಸರು ಕಾವಲು ಕಾಯುತ್ತಿದ್ದಾರೆ. ರಾಜಭವನ ರಸ್ತೆಯಲ್ಲಿ ವಾಹನಗಳ ಓಡಾಟ ಹೆಚ್ಚಿದ್ದು, ದಟ್ಟಣೆ ಉಂಟಾಗದಂತೆ ನೋಡಿಕೊಳ್ಳಲು ಸಂಚಾರ ಪೊಲೀಸರನ್ನು ನಿಯೋಜಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.