ADVERTISEMENT

ಬಿಜೆಪಿ ಸೇರುವ ನಿರ್ಧಾರ ಮಾಡಿಲ್ಲ: ಶಾಸಕರ ಹೇಳಿಕೆ

ಮಧ್ಯಪ್ರದೇಶದ ಬಂಡಾಯ ಶಾಸಕರಿಂದ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2020, 21:22 IST
Last Updated 17 ಮಾರ್ಚ್ 2020, 21:22 IST
ಮಧ್ಯಪ್ರದೇಶ ಕಾಂಗ್ರೆಸ್ ಶಾಸಕರು (ಸಂಗ್ರಹ ಚಿತ್ರ)
ಮಧ್ಯಪ್ರದೇಶ ಕಾಂಗ್ರೆಸ್ ಶಾಸಕರು (ಸಂಗ್ರಹ ಚಿತ್ರ)   

ಬೆಂಗಳೂರು: ತಾವು ಜ್ಯೋತಿರಾಧಿತ್ಯ ಸಿಂಧಿಯಾ ಅವರನ್ನು ಬೆಂಬಲಿಸುತ್ತಿದ್ದರೂ, ಬಿಜೆಪಿ ಸೇರುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ ಎಂದು ಮಧ್ಯಪ್ರದೇಶದ ಕಾಂಗ್ರೆಸ್‌ನ ಬಂಡಾಯ ಶಾಸಕರು ಹೇಳಿದ್ದಾರೆ.

ನಗರದ ರೆಸಾರ್ಟ್‌ ಒಂದರಲ್ಲಿ ತಂಗಿರುವ ಅವರು, ಬಂಡಾಯ ಶಾಸಕರ ಇಚ್ಛೆಗೆ ವಿರುದ್ಧವಾಗಿ ಬೆಂಗಳೂರಿನಲ್ಲಿ ಅವರನ್ನು ಕೂಡಿ ಹಾಕಲಾಗಿದೆ ಎಂಬ ಸಿ.ಎಂ ಕಮಲನಾಥ್‌ ಹೇಳಿಕೆಯನ್ನು ಅಲ್ಲಗಳೆಯಲು ಹಾಗೂ ಅವರ ಕಾರ್ಯವೈಖರಿಯಿಂದಾಗಿಯೇ ಕಾಂಗ್ರೆಸ್‌ ಶಾಸಕರಲ್ಲಿ ಅಸಮಾಧಾನ ಇದೆ ಎಂಬುದನ್ನು ತಿಳಿಸಲು ಈ ಪತ್ರಿಕಾಗೋಷ್ಠಿ ನಡೆಸಲಾಗಿದೆ ಎಂದರು. ‘ನಮಗೆ ಕಮಲನಾಥ್‌ ಅವರಿಂದ ಬೆದರಿಕೆ ಇದೆ, ಹೀಗಾಗಿ ಕೇಂದ್ರೀಯ ಪಡೆಗಳಿಂದ ರಕ್ಷಣೆ ನೀಡಬೇಕು’ ಎಂದು ಶಾಸಕ ಗೋವಿಂದ್ ಸಿಂಗ್‌ ರಜಪೂತ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT