ADVERTISEMENT

‘ಸಂಚಾರ ನಿಯಮ ಉಲ್ಲಂಘನೆಗೆ ಹೆಚ್ಚಿನ ದಂಡ ಸ್ವಾಗತಾರ್ಹ’

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2020, 20:48 IST
Last Updated 16 ಫೆಬ್ರುವರಿ 2020, 20:48 IST
ಪ್ರೊ.ಬಿ.ಕೆ.ಚಂದ್ರಶೇಖರ್‌
ಪ್ರೊ.ಬಿ.ಕೆ.ಚಂದ್ರಶೇಖರ್‌   

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ವಿಧಿಸಿದ್ದ ದಂಡವನ್ನೇ ರಾಜ್ಯದಲ್ಲಿ ಜಾರಿಗೆ ತರುವುದಾಗಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದನ್ನು ಕಾಂಗ್ರೆಸ್ ನಾಯಕ ಪ್ರೊ.ಬಿ.ಕೆ.ಚಂದ್ರಶೇಖರ್‌ ಅವರು ಸ್ವಾಗತಿಸಿದ್ದಾರೆ.

‘ಉಲ್ಲಂಘನೆಗೆ ವಿಧಿಸುವ ದಂಡ ಲಿಖಿತ ರೂಪದಲ್ಲಿರುವ ನೋಟಿಸ್‌ ಮೂಲಕ ಮಾತ್ರವೇ ಸಂದಾಯವಾಗಬೇಕು ಎಂದು ನಿಯಮ
ರೂಪಿಸಬೇಕು. ಇದರಿಂದ ಸಾರ್ವಜನಿಕರು ಮತ್ತು ಪೊಲೀಸರ ನಡುವೆ ಸ್ಥಳದಲ್ಲಿ ಕಾನೂನುಬಾಹಿರವಾಗಿ ಯಾವುದೇ ರೀತಿಯ ‘ಒಪ್ಪಂದ’ ಆಗಲು ಅವಕಾಶ ಇಲ್ಲ’ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT