ADVERTISEMENT

ವಿಶೇಷ ಅಧಿವೇಶನದ ಬಗ್ಗೆ ಬಿ.ಕೆ ಹರಿಪ್ರಸಾದ್‌ ಟೀಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಸೆಪ್ಟೆಂಬರ್ 2023, 16:23 IST
Last Updated 13 ಸೆಪ್ಟೆಂಬರ್ 2023, 16:23 IST
 ಬಿ.ಕೆ. ಹರಿಪ್ರಸಾದ್‌
ಬಿ.ಕೆ. ಹರಿಪ್ರಸಾದ್‌   

ಬೆಂಗಳೂರು: ಕೇವಲ ಇಬ್ಬರೂ ವ್ಯಕ್ತಿಗಳಿಗೆ ತಿಳಿದಿರುವ ಅಜೆಂಡಾಗಳೊಂದಿಗೆ ಸಂಸತ್‌ನ ವಿಶೇಷ ಅಧಿವೇಶನವು ಭಾರತದ ಗಮನಾರ್ಹ ಬದಲಾವಣೆಗೆ ಸಾಕ್ಷಿಯಾಗುತ್ತದೆ ಎಂದು ಹೇಳಿತ್ತಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ಕಾಂಗ್ರೆಸ್‌ ಮುಖಂಡ ಬಿ.ಕೆ ಹರಿಪ್ರಸಾದ್‌ ಹೇಳಿದ್ದಾರೆ.

ವಿಶೇಷ ಅಧಿವೇಶನ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಪ್ರಜಾಪ್ರಭುತ್ವದಲ್ಲಿ ಪಾರದಶರ್ಕತೆಯು ಅಭಿವೃದ್ದಿಯ ಸಂಕೇತ. ಸಂಸದೀಯ ಪ್ರಜಾಪ್ರಭುತ್ವ ಎಂದು ಕರೆದಾಗ, ನಾವು ಸಂಸದೀಯ ಸಂಪ್ರದಾಯಗಳನ್ನು ಎತ್ತಿ ಹಿಡಿಯುವುದು ಅತ್ಯಗತ್ಯವಾಗಿದೆ ಎಂದು ತಿಳಿಸಿದ್ದಾರೆ.

ಸಂಸತ್ತಿನ ವಿಶೇಷ ಅಧಿವೇಶನವನ್ನು ಸಪ್ಟೆಂಬರ್ 18 ರಿಂದ 22ರ ವರೆಗೆ ಕರೆಯಲಾಗಿದ್ದು, ಒಟ್ಟು 5 ಅವಧಿಗಳು ಇರಲಿವೆ. 17ನೇ ಲೋಕಸಭೆಯ 13ನೇ ಅಧಿವೇಶನ ಹಾಗೂ ರಾಜ್ಯಸಭೆಯ 261ನೇ ಅಧಿವೇಶನ ಇದಾಗಿರಲಿದೆ. ಅಮೃತ್ ಕಾಲದ ಈ ಮಹತ್ವದ ಕಾಲಫಟ್ಟದಲ್ಲಿ ಒಂದು ರಚನಾತ್ಮಕ ಅಧಿವೇಶವನ್ನು ಎದುರು ನೋಡುತ್ತಿದ್ದೇವೆ ಎಂದು ಜೋಶಿ ಹೇಳಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.