ADVERTISEMENT

ಋಷಿಕುಮಾರ ಸ್ವಾಮೀಜಿ‌ ಮುಖಕ್ಕೆ ಮಸಿ: ಕನ್ನಡ ಸಂಘಟನೆ ಕಾರ್ಯಕರ್ತರ ಕೃತ್ಯ

​ಪ್ರಜಾವಾಣಿ ವಾರ್ತೆ
Published 12 ಮೇ 2022, 19:27 IST
Last Updated 12 ಮೇ 2022, 19:27 IST

ಬೆಂಗಳೂರು: ಅರಸೀಕೆರೆ ಕಾಳಿ ಮಠದ ಋಷಿಕುಮಾರ ಸ್ವಾಮೀಜಿ ಅವರ ಮುಖಕ್ಕೆ ಮಸಿ ಬಳಿಯಲಾಗಿದ್ದು, ಕನ್ನಡ ಸಂಘಟನೆಯ ಕಾರ್ಯಕರ್ತರು ಕೃತ್ಯ ಎಸಗಿರುವುದಾಗಿ ಗೊತ್ತಾಗಿದೆ.

ಮಲ್ಲೇಶ್ವರದ ಗಂಗಮ್ಮ ದೇವಸ್ಥಾನಕ್ಕೆ ಸ್ವಾಮೀಜಿ ಗುರುವಾರ ಸಂಜೆ ಬಂದಿದ್ದರು. ಇದೇ ವೇಳೆ ಸ್ಥಳದಲ್ಲಿದ್ದ ಕೆಲವರು, ಸ್ವಾಮೀಜಿ ಅವರ ಮುಖಕ್ಕೆ ಕಪ್ಪು ಮಸಿ ಬಳಿದಿದ್ದಾರೆ.

‘ಕನ್ನಡ ಹೋರಾಟಗಾರರನ್ನು ಗುಂಡಿಕ್ಕಿ ಕೊಲ್ಲಿ ಎಂಬುದಾಗಿ ಸ್ವಾಮೀಜಿ ಹೇಳಿಕೆ ನೀಡಿದ್ದರು. ಇದನ್ನು ವಿರೋಧಿಸಿ ಕಪ್ಪು ಮಸಿ ಬಳಿಯಲಾಗಿದೆ’ ಎಂದು ತಿಳಿದುಬಂದಿದೆ.

ADVERTISEMENT

ಈ ಘಟನೆ ಸಂಬಂಧ ಸ್ವಾಮೀಜಿ ಅವರು ಪೊಲೀಸರಿಗೆ ಯಾವುದೇ ದೂರು ನೀಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.