ADVERTISEMENT

ರೈಲ್ವೆ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2023, 15:49 IST
Last Updated 29 ಸೆಪ್ಟೆಂಬರ್ 2023, 15:49 IST
ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದ ರೈಲ್ವೆ ಆಸ್ಪತ್ರೆಯಲ್ಲಿ ಗುರುವಾರ ರಕ್ತದಾನ ಶಿಬಿರ ನಡೆಯಿತು.
ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದ ರೈಲ್ವೆ ಆಸ್ಪತ್ರೆಯಲ್ಲಿ ಗುರುವಾರ ರಕ್ತದಾನ ಶಿಬಿರ ನಡೆಯಿತು.   

ಬೆಂಗಳೂರು: ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದ ರೈಲ್ವೆ ಆಸ್ಪತ್ರೆಯಲ್ಲಿ ಗುರುವಾರ ರಕ್ತದಾನ ಶಿಬಿರ ನಡೆಯಿತು.

ಮಲ್ಲೇಶ್ವರಂ ವಾಲಂಟರಿ ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ನಡೆದ ರಕ್ತದಾನ ಶಿಬಿರವನ್ನು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೀಶ್ ಮೋಹನ್‌ ಉದ್ಘಾಟಿಸಿದರು. ರೈಲ್ವೆ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕಿ ಡಾ. ಶೋಭಾ ಜಗನ್ನಾಥ್ ಇದ್ದರು.

ವೈದ್ಯಾಧಿಕಾರಿಗಳು, ರೈಲ್ವೆ ಆಸ್ಪತ್ರೆಯ ಸಿಬ್ಬಂದಿ, ಇತರ ವಿಭಾಗಗಳ ಸಿಬ್ಬಂದಿ, ಗುತ್ತಿಗೆ ಸಿಬ್ಬಂದಿ ಮತ್ತು ಆಸ್ಪತ್ರೆಯ ಸಂದರ್ಶಕರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು.

ADVERTISEMENT

ಸ್ವಯಂಪ್ರೇರಿತ ಅಂಗದಾನ ಪ್ರತಿಜ್ಞೆಯನ್ನು ತೆಗೆದುಕೊಳ್ಳಲಾಯಿತು. ಕೆಲವು ಸ್ವಯಂಸೇವಕರು ಯಕೃತ್‌, ಮೂತ್ರಪಿಂಡ, ಕಣ್ಣು ಸಹಿತ ಪ್ರಮುಖ ಅಂಗಾಂಗಳನ್ನು ದಾನ ಮಾಡಲು ವಾಗ್ದಾನ ಮಾಡಿದರು. ದಾನಿಗಳಿಗೆ ಅಂಗದಾನ ಪ್ರತಿಜ್ಞೆ ಪ್ರಮಾಣಪತ್ರಗಳು ಮತ್ತು ರಕ್ತದಾನ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.