ADVERTISEMENT

ಬಿಎಂಟಿಸಿ ಬಸ್‌ ಹರಿದು ಪಾದಚಾರಿ ಸಾವು

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2021, 20:27 IST
Last Updated 26 ಡಿಸೆಂಬರ್ 2021, 20:27 IST
ಬಿಎಂಟಿಸಿ ಬಸ್‌
ಬಿಎಂಟಿಸಿ ಬಸ್‌   

ಬೆಂಗಳೂರು: ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್‌ ನಿಲ್ದಾಣದ ನಿರ್ಗಮನ ಗೇಟ್‌ ಬಳಿ ಬಸ್‌ ಹರಿದು ಪಿ.ಕೃಷ್ಣಮೂರ್ತಿ (45) ಎಂಬುವರು ಮೃತಪಟ್ಟಿದ್ದಾರೆ. ಈ ಸಂಬಂಧ ಉಪ್ಪಾರಪೇಟೆ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಉತ್ತರಹಳ್ಳಿ ಮುಖ್ಯ ರಸ್ತೆಯ ಚಿಕ್ಕಲಸಂದ್ರ ನಿವಾಸಿಯಾಗಿರುವ ಕೃಷ್ಣಮೂರ್ತಿ ಅವರು ಖಾಸಗಿ ವಾಹನವೊಂದರ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಭಾನುವಾರ ಮಧ್ಯಾಹ್ನ 3.30ರ ಸುಮಾರಿಗೆ ಬಿಎಂಟಿಸಿ ಬಸ್‌ ನಿಲ್ದಾಣದ ಮೂರನೇ ನಿರ್ಗಮನ ದ್ವಾರದ ಬಳಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ನಿಲ್ದಾಣದ ಒಳಭಾಗದಿಂದ ವೇಗವಾಗಿ ಬಂದ ಬಿಎಂಟಿಸಿ ಬಸ್‌ (ಕೆಎ 57, ಎಫ್ 4273) ಕೃಷ್ಣಮೂರ್ತಿಯವರಿಗೆ ಡಿಕ್ಕಿ ಹೊಡೆದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT