ADVERTISEMENT

ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್‌ ಗುದ್ದಿ ಭಿಕ್ಷುಕ ಸಾವು

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2021, 19:21 IST
Last Updated 9 ಫೆಬ್ರುವರಿ 2021, 19:21 IST

ಬೆಂಗಳೂರು: ಮೆಜೆಸ್ಟಿಕ್ ಆನಂದರಾವ್ ವೃತ್ತ ಬಳಿಯ ಮೇಲ್ಸೇತುವೆಯಲ್ಲಿ ಬಿಎಂಟಿಸಿ ಬಸ್ಸೊಂದು ಗುದ್ದಿ ಭಿಕ್ಷುಕರೊಬ್ಬರು ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ‘ಮೃತ ಭಿಕ್ಷುಕನ ವಯಸ್ಸು 35 ವರ್ಷವಿರಬಹುದೆಂದು ಹೇಳಲಾಗಿದ್ದು, ನಿರ್ಲಕ್ಷ್ಯದಿಂದ ಬಸ್ ಚಲಾಯಿಸಿದ್ದ ಆರೋಪದಡಿ ಚಾಲಕ ಶಾಮಣ್ಣ ಎಂಬುವರನ್ನು ಬಂಧಿಸಲಾಗಿದೆ’ ಎಂದು ಉಪ್ಪಾರಪೇಟೆ ಸಂಚಾರ ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.