ADVERTISEMENT

ಪೀಣ್ಯ ಎರಡನೇ ಹಂತ | ಬಿಎಂಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 29 ಜುಲೈ 2025, 19:06 IST
Last Updated 29 ಜುಲೈ 2025, 19:06 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಬೆಂಗಳೂರು: ಪೀಣ್ಯ ಎರಡನೇ ಹಂತದ ಎನ್‍ಟಿಟಿಎಫ್ ರಸ್ತೆಯಲ್ಲಿ ಮಂಗಳವಾರ ರಾತ್ರಿ ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ADVERTISEMENT

ಯಾದಗಿರಿ ಜಿಲ್ಲೆಯ ದೇವೇಂದ್ರಪ್ಪ (22) ಮೃತಪಟ್ಟ  ಸವಾರ. ದೇವೇಂದ್ರಪ್ಪ ಅವರು ಅಂಧ್ರಹಳ್ಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಬೈಕ್‍ನಲ್ಲಿ ಹೋಗುತ್ತಿದ್ದ ದೇವೇಂದ್ರಪ್ಪಗೆ ಬಸ್ ಡಿಕ್ಕಿ ಹೊಡೆದಿದೆ. ಆಗ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್, ಪೀಣ್ಯ ಎರಡನೇ ಹಂತದಿಂದ ಜಾಲಹಳ್ಳಿ ಕಡೆಗೆ ಚಲಿಸುತ್ತಿತ್ತು. ಚಾಲಕನನ್ನು ಬಂಧಿಸಿ ಬಸ್ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

ಪೀಣ್ಯ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.