ಬೆಂಗಳೂರು: ಯಲಹಂಕ–ನಾಗವಾರ ಮಾರ್ಗದಲ್ಲಿ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಆಯೂಬ್ (35) ಎಂಬುವವರು ಮೃತಪಟ್ಟಿದ್ದಾರೆ.
ಸ್ಥಳದಲ್ಲಿದ್ದ ಮೂವರು ಗಾಯಗೊಂಡಿದ್ದಾರೆ. ಗಾಯಗೊಂಡಿರುವ ರಫಿಯುಲ್ಲಾ, ಮಸಾದ್ದೀಕ್, ಮುನ್ನಾವರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಭಾರತೀಯ ಟಿ.ಸಿ ಜಂಕ್ಷನ್ ಬಳಿ ನಿಂತಿದ್ದ ಕಾರು ಹಾಗೂ ಬೈಕ್ಗಳಿಗೆ ಹೆಗಡೆ ನಗರದ ಕಡೆಗೆ ತೆರಳುತ್ತಿದ್ದ ಬಿಎಂಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಈ ಅವಘಡ ನಡೆದಿದೆ.
ಚಾಲಕನ ನಿಯಂತ್ರಣ ಕಳೆದುಕೊಂಡಿದ್ದ ಬಸ್ ಎರಡು ಕಾರು ಹಾಗೂ ಬೈಕ್ಗೆ ಡಿಕ್ಕಿಯಾಗಿದೆ.
ಈ ಅವಘಡಕ್ಕೆ ಬಸ್ನ ಬ್ರೇಕ್ ವಿಫಲವಾಗಿರುವುದು ಕಾರಣವೆಂದು ಹೇಳಲಾಗಿದೆ. ಚಿಕ್ಕಜಾಲ ಪೊಲೀಸರು ಬಸ್ ಚಾಲಕ ಗೋವಿಂದರಾಜು ಅವರನ್ನು ವಶಕ್ಕೆ ಪಡೆದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.