ಬೆಂಗಳೂರು: ಎಚ್ಎಸ್ಆರ್ ಲೇಔಟ್ ಹಾಗೂ ಚಿಕ್ಕಜಾಲ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಅಪಘಾತಗಳು ಸಂಭವಿಸಿದ್ದು, ಸಾಫ್ಟ್ವೇರ್ ಕಂಪನಿ ಉದ್ಯೋಗಿ ಸೇರಿ ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ.
ಇಬ್ಬಲೂರು ಜಂಕ್ಷನ್ ಬಳಿ ಬಿಎಂಟಿಸಿ ವೋಲ್ವೊ ಬಸ್ಸಿನ ಚಕ್ರ ಹರಿದು ಬೈಕ್ ಸವಾರ ವಿಷ್ಣುತೀರ್ಥ (31) ಎಂಬುವರು ಮೃತಪಟ್ಟಿದ್ದಾರೆ.
‘ಸಾಫ್ಟ್ವೇರ್ ಕಂಪನಿಯ ಮಾನವ ಸಂಪನ್ಮೂಲ ವಿಭಾಗದ ಉದ್ಯೋಗಿ ಆಗಿದ್ದ ವಿಷ್ಣುತೀರ್ಥ, ಸ್ನೇಹಿತ ಸಾಯಿಕೃಷ್ಣ (26) ಜೊತೆಯಲ್ಲಿ ಬೈಕ್ನಲ್ಲಿ ಹೊರಟಿದ್ದರು. ಗಾಯಗೊಂಡಿರುವ ಸಾಯಿಕೃಷ್ಣ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದುಎಚ್ಎಸ್ಆರ್ ಲೇಔಟ್ ಸಂಚಾರ ಪೊಲೀಸರು ಹೇಳಿದರು.
ಎಂಜಿನಿಯರ್ ಸಾವು: ಬಿ.ಬಿ.ರಸ್ತೆಯಲ್ಲಿ ಅಪರಿಚಿತ ವಾಹನವೊಂದು ಬೈಕ್ಗೆ ಗುದ್ದಿದ್ದರಿಂದಾಗಿ ಸವಾರ ಹರೀಶ್ಬಾಬು (32) ಎಂಬುವರು ಮೃತಪಟ್ಟಿದ್ದಾರೆ. ದೇವನಹಳ್ಳಿ ನಿವಾಸಿ ಹರೀಶ್ಬಾಬು, ಸಾಫ್ಟ್ವೇರ್ ಎಂಜಿನಿಯರ್. ಚಾಲಕ ಪರಾರಿಯಾಗಿದ್ದಾನೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.