ADVERTISEMENT

ವ್ಹೀಲಿಂಗ್: ದ್ವಿಚಕ್ರ ವಾಹನ ಗುದ್ದಿ ಮಹಿಳೆಗೆ ಗಾಯ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2022, 7:18 IST
Last Updated 10 ಏಪ್ರಿಲ್ 2022, 7:18 IST
ಸಚಿವ ಗೋವಿಂದ ಕಾರಜೋಳ ಕಾರ್ಯಕ್ರಮ ಉದ್ಘಾಟಿಸಿದರು
ಸಚಿವ ಗೋವಿಂದ ಕಾರಜೋಳ ಕಾರ್ಯಕ್ರಮ ಉದ್ಘಾಟಿಸಿದರು   

ಬೆಂಗಳೂರು: ಗೋರಿಪಾಳ್ಯದಲ್ಲಿ ಅಪಾಯಕಾರಿಯಾಗಿ ವ್ಹೀಲಿಂಗ್ ಮಾಡಿದ್ದ ಯುವಕರಿಬ್ಬರು, ದ್ವಿಚಕ್ರ ವಾಹನವನ್ನು ಮಹಿಳೆಗೆ ಗುದ್ದಿಸಿ ಪರಾರಿಯಾಗಿದ್ದಾರೆ.

‘ಏಪ್ರಿಲ್ 6ರಂದು ನಡೆದಿರುವ ಘಟನೆಯಿಂದಾಗಿ ಮಹಿಳೆ ಗಾಯ ಗೊಂಡಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಚೇತರಿಸಿಕೊಳ್ಳು ತ್ತಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಗೋರಿಪಾಳ್ಯದ ನರಸಿಂಹ ಸ್ವಾಮಿ ದೇವಸ್ಥಾನದ ರಸ್ತೆ ಪಕ್ಕ ಮಹಿಳೆ ನಡೆದು ಹೋಗುತ್ತಿದ್ದರು. ಅಪಾಯಕಾರಿಯಾಗಿ ವ್ಹೀಲಿಂಗ್ ಮಾಡಿಕೊಂಡು ಬಂದಿದ್ದ ಯುವಕರು, ದ್ವಿಚಕ್ರ ವಾಹನವನ್ನು ಮಹಿಳೆಗೆ ಗುದ್ದಿಸಿದ್ದಾರೆ. ಈ ದೃಶ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆ ಯಾಗಿದೆ. ಅದನ್ನೇ ಪುರಾವೆ ಯಾಗಿ ಪರಿಗಣಿಸಿ, ಯುವಕರ ಪತ್ತೆಗೆ ಕ್ರಮ ಕೈಗೊಂಡಿದ್ದೇವೆ’ ಎಂದೂ ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.