ಬೆಂಗಳೂರು: ‘ಇನ್ನೊಂದು ವಾರದಲ್ಲಿ ವಿಧಾನಸೌಧಕ್ಕೆ ಬಾಂಬ್ ಇಡುತ್ತೇವೆ’ ಎಂದು ಅಪರಿಚಿತ ವ್ಯಕ್ತಿಯೊಬ್ಬ ಫೇಸ್ಬುಕ್ನಲ್ಲಿ ಬೆದರಿಕೆ ಸಂದೇಶ ಬರೆದ ವಿಷಯಕ್ಕೆ ಸಂಬಂಧಿಸಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಟಕ್ಲಾಚಾಟ್ ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಈ ಬೆದರಿಕೆ ಸಂದೇಶ ಹಾಕಲಾಗಿದೆ. ಈ ಸಂದೇಶ ವಿಠಲ್ ಕಂಬಾರ್ ಎಂಬುವವರಿಗೆ ಸಿಕ್ಕಿದ್ದು, ಅವರು ಇಲಾಖೆಯ ಮೇಲಧಿಕಾರಿಗಳಿಗೆ ಮಾಹಿತಿ ನೀಡಿದ್ದರು.
ವಿಧಾನಸೌಧ ಭದ್ರತೆ ವಿಭಾಗದ ಇನ್ಸ್ಪೆಪೆಕ್ಟರ್ ರಾಜು ಎಂಬುವವರು ನೀಡಿದ ದೂರಿನ ಅನ್ವಯ ಅಪರಿಚಿತರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.
ಟಕ್ಲಾಚಾಟ್ ಹೆಸರಿನ ಫೇಸ್ಬುಕ್ ಖಾತೆ ಹೊಂದಿದ ವ್ಯಕ್ತಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.