ADVERTISEMENT

23ರಂದು ಯುವ ಬರಹಗಾರರ ಚೊಚ್ಚಲ ಕೃತಿಗಳ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 14 ಜನವರಿ 2019, 18:59 IST
Last Updated 14 ಜನವರಿ 2019, 18:59 IST

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರ ವತಿಯಿಂದ ಇದೇ 23 ರಂದು ಬೆಳಿಗ್ಗೆ 11ಕ್ಕೆ ಯುವ ಬರಹಗಾರರ ಚೊಚ್ಚಲ ಕೃತಿಗಳ ಬಿಡುಗಡೆ-2017 ಮತ್ತು ಶಾಲಾ–ಕಾಲೇಜುಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.

ನಯನ ರಂಗಮಂದಿರದಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ಸಾಹಿತಿಗಳಾದ ಡಾ.ಸಿದ್ದಲಿಂಗಯ್ಯ ಮತ್ತು ವಿಕ್ರಮ ವಿಸಾಜಿ ಅವರು ಪುಸ್ತಕಗಳನ್ನು ಬಿಡುಗಡೆ ಮಾಡಲಿದ್ದಾರೆ. ಪ್ರಾಧಿಕಾರದ ಅಧ್ಯಕ್ಷೆ ವಸುಂಧರಾ ಭೂಪತಿ ಅಧ್ಯಕ್ಷತೆ ವಹಿಸಲಿದ್ದಾರೆ.

2017ರಲ್ಲಿ ಯುವ ಬರಹಗಾರರು ರಚಿಸಿದ 50 ಪುಸ್ತಕಗಳು ಅಂದು ಬಿಡುಗಡೆಯಾಗಲಿವೆ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.