ADVERTISEMENT

ಕೋಮುವಾದವು ಕೋವಿಡ್‌ಗಿಂತ ಅಪಾಯಕಾರಿ: ಎಸ್‌.ಜಿ. ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2020, 20:58 IST
Last Updated 24 ನವೆಂಬರ್ 2020, 20:58 IST
   

ಬೆಂಗಳೂರು: ‘ಕೋಮುವಾದವು ಕೊರೊನಾಗಿಂತಲೂ ಅಪಾಯಕಾರಿ ಯಾದ ವೈರಾಣು’ ಎಂದು ಸಾಹಿತಿ ಪ್ರೊ.ಎಸ್. ಜಿ. ಸಿದ್ದರಾಮಯ್ಯ ಅಭಿಮತ ವ್ಯಕ್ತಪಡಿಸಿದರು.

‘ಅವಧಿ’ಯು ಆನ್‌ಲೈನ್‌ನಲ್ಲಿ ಹಮ್ಮಿ ಕೊಂಡಿದ್ದ ಕಾರ್ಯಕ್ರಮದಲ್ಲಿ ಅವರ ‘ಬಿಜ್ಜಳ ನ್ಯಾಯ’ ಹಾಗೂ ‘ದಕ್ಕದ ದಾರಿಯಲ್ಲಿ’ ಕವನ ಸಂಕಲನಗಳನ್ನು ಬಿಡುಗಡೆ ಮಾಡಲಾಯಿತು.

‘ಶತಮಾನಗಳಿಂದ ದೇಶಕ್ಕೆ ಅಂಟಿ ಕೊಂಡು ಬಂದಿರುವ ಕೋಮುವಾದವೇ ಅತ್ಯಂತ ವಿಷಕಾರಿ ಯಾದ ರೋಗ. ಅದನ್ನು ದಾಟುವುದೇ ಇಂದಿನ ಮುಖ್ಯ ಸವಾಲು. ಅದರಿಂದ ಮುಕ್ತವಾಗದ ಹೊರತು ಈ ದೇಶಕ್ಕೆ ಭವಿಷ್ಯವಿಲ್ಲ. ಯಾರು ಈ ಕೋಮುವಾದಕ್ಕೆ ಬಲಿಯಾಗುತ್ತಿದ್ದಾರೋ, ಅವರೇ ಈ ಕೋಮುವಾದದ ಮುನ್ನಡೆಗೆ ಕಾಲಾಳು ಗಳಾಗಿರುವ ದುರಂತವನ್ನು ನಾವು ಕಾಣುತ್ತಿದ್ದೇವೆ’ ಎಂದು ತಿಳಿಸಿದರು.

ADVERTISEMENT

ವಿಮರ್ಶಕ ರಾಮಲಿಂಗಪ್ಪ ಟಿ. ಬೇಗೂರು, ‘ಎಸ್.ಜಿ. ಸಿದ್ಧರಾಮಯ್ಯ ಅವರ ಜನಪರ, ಜೀವಪರ ದೃಷ್ಟಿ ಕೋನವು ಬರವಣಿಗೆಯ ಮುಖ್ಯ ಕೇಂದ್ರವಾಗಿದೆ. ಓದುಗನೂ ಕವಿತೆ ಯನ್ನು ಅನುಭವಿಸುವಂತೆ ಅವರು ಬರೆಯುತ್ತಾರೆ. ಅಪರಿಮಿತದ ಹಂಬಲ ಮತ್ತು ಓದುಗನಿಗೆ ಅರ್ಥದ ತೊಡಕಾಗಬಾರದು ಎನ್ನುವ ಕಾಳಜಿ ಅವರಿಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.