ಬೆಂಗಳೂರು: ನೀರು ಶುದ್ಧೀಕರಣ ಘಟಕದ ಬಳಿಯ ತೊಟ್ಟಿಯಲ್ಲಿ ಈಜಲುಗೆಳೆಯರೊಂದಿಗೆ ಹೋಗಿದ್ದ 14 ವರ್ಷದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಈ ಸಂಬಂಧ ಬಾಣಸವಾಡಿಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಬೈಯಪ್ಪನಹಳ್ಳಿ ಮೆಟ್ರೊ ನಿಲ್ದಾಣದ ಬಳಿಯ ನಾಗಯ್ಯನಪಾಳ್ಯದಲ್ಲಿ ರೈಲ್ವೆ ಇಲಾಖೆಯವರು ನೀರು ಶುದ್ಧೀಕರಣ ಘಟಕ ಸ್ಥಾಪಿಸಿದ್ದು ಅಲ್ಲಿ ತೊಟ್ಟಿಯೊಂದು ಇದೆ. ಅದರ ಸುತ್ತಲೂ ಕಾಂಪೌಂಡ್ ಕೂಡ ಹಾಕಲಾಗಿದೆ. ಹೀಗಿದ್ದರೂ ಮೃತ ಬಾಲಕ ಹಾಗೂ ಆತನ ಸ್ನೇಹಿತರು ಅದರಲ್ಲಿ ಈಜಾಡಿ, ಬಳಿಕ ಮೀನು ಹಿಡಿದುಕೊಂಡು ಬರಲು ಅಲ್ಲಿಗೆ ಹೋಗಿದ್ದರು ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.