ADVERTISEMENT

ತೆರಿಗೆ ಅಧಿಕಾರಿ ಸೋಗಿನಲ್ಲಿ ಲಾರಿ ಮಾಲೀಕರ ಬಳಿ ಹಣಕ್ಕೆ ಬೇಡಿಕೆ: ವ್ಯಕ್ತಿಯ ಬಂಧನ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2021, 6:16 IST
Last Updated 28 ಸೆಪ್ಟೆಂಬರ್ 2021, 6:16 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ವಾಣಿಜ್ಯ ತೆರಿಗೆ ಅಧಿಕಾರಿ‌ ಎಂದು ಹೇಳಿಕೊಂಡು‌ಲಾರಿ‌ ಮಾಲೀಕರ ಬಳಿ‌ ಹಣಕ್ಕೆ‌ ಬೇಡಿಕೆ ಇಡುತ್ತಿದ್ದ ಆರೋಪದಡಿ ಚೆನ್ನಪ್ಪ ಎಂಬವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

'ಆರೋಪಿ ಚೆನ್ನಪ್ಪ, ಲಾರಿ ಮಾಲೀಕರನ್ನು ಬೆದರಿಸುತ್ತಿದ್ದರು. ಹಣಕ್ಕೆ ಬೇಡಿಕೆ ಇರಿಸುತ್ತಿದ್ದರು. ಈ ಬಗ್ಗೆ ಲಾರಿ‌ ಮಾಲೀಕರೊಬ್ಬರು ದೂರು‌ ನೀಡಿದ್ದರು' ಎಂದು ಸಿಸಿಬಿ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

'ತನಿಖೆ‌ ಕೈಗೊಂಡು‌ ಆರೋಪಿಯನ್ನು ಬಂಧಿಸಲಾಗಿದೆ. ನ್ಯಾಯಾಲಯಕ್ಕೆ‌ ಹಾಜರುಪಡಿಸಲಾಗುವುದು. ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ನ್ಯಾಯಾಲಯವನ್ನು‌ ಕೋರುತ್ತೇವೆ' ಎಂದೂ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.