ADVERTISEMENT

ಕಳಪೆ ಕಾಳುಮೆಣಸು ಆಮದು; ಆರೋಪ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2019, 20:28 IST
Last Updated 13 ಸೆಪ್ಟೆಂಬರ್ 2019, 20:28 IST
   

ಬೆಂಗಳೂರು: ‘ವಿಯೆಟ್ನಾಂನಿಂದ ಕಳಪೆ ಗುಣಮಟ್ಟದ ಕಾಳುಮೆಣಸು ಆಮದು ಮಾಡಿ ₹5000 ಕೋಟಿ ಹವಾಲಾ ದಂಧೆ ನಡೆಸುತ್ತಿದ್ದಾರೆ. ಈ ಬಗ್ಗೆ ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದರೂ ತನಿಖೆ ನಡೆಸದೇ, ಕೇವಲ ₹ 8 ಕೋಟಿ ಪ್ರಕರಣದಲ್ಲಿ ಶಾಸಕ ಡಿ.ಕೆ.ಶಿವಕುಮಾರ್‌ ಅವರನ್ನು ಬಂಧಿಸಿದ್ದಾರೆ’ ಎಂದು ಕಾಂಗ್ರೆಸ್‌ ವಕ್ತಾರ ಬ್ರಿಜೇಶ್‌ ಕಾಳಪ್ಪ ಶುಕ್ರವಾರ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಅವರು, ‘ಸಗಟು ವ್ಯಾಪಾರದಲ್ಲಿ ನಕಲಿ ಬಿಲ್‌ ಸೃಷ್ಟಿಸಿ ಕಾಳುಮೆಣಸನ್ನು ತಂದು ದೇಶದಲ್ಲಿ ಕಡಿಮೆ ದರಕ್ಕೆ ಮಾರಾಟ ಮಾಡಲಾಗುತ್ತಿದೆ. ರಾಜ್ಯದ ಕಾಳುಮೆಣಸು ಬೆಳೆಗಾರರಿಗೆ ಇದರಿಂದ ಅನ್ಯಾಯವಾಗುತ್ತಿದೆ’ ಎಂದು ವಿಷಾದಿಸಿದರು.

ಈ ಬಗ್ಗೆ ಹಲವು ಬಾರಿ ದೂರು ನೀಡಿದ್ದರೂ, ಕ್ರಮ ಕೈಗೊಂಡಿಲ್ಲ. ಇಡಿ ಇಲಾಖೆ ಜನರ ಕ್ಷೇಮಕ್ಕಾಗಿ ಇದೆಯೋ? ಅಥವಾ ರಾಜಕೀಯ ಪ್ರೇರಿತವಾಗಿ ಇದೆಯೋ ತಿಳಿಯುತ್ತಿಲ್ಲ ಎಂದರು.

ADVERTISEMENT

ಒಕ್ಕೂಟದ ಸದಸ್ಯರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.