ADVERTISEMENT

ನೆರೆ ಹಾನಿ: ಅ.21ರಂದು ಸಿಎಂ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2020, 6:39 IST
Last Updated 18 ಅಕ್ಟೋಬರ್ 2020, 6:39 IST
ಬಿಎಸ್‌ವೈ
ಬಿಎಸ್‌ವೈ   

ಬೆಂಗಳೂರು: ಕಲಬುರ್ಗಿ, ಯಾದಗಿರಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪ್ರವಾಹದಿಂದ ಉಂಟಾಗಿರುವ ಹಾನಿಯ ಕುರಿತು ಅವಲೋಕಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇದೇ ಬುಧವಾರ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

'ವಾಯುಭಾರ ಕುಸಿತದಿಂದ ಐದು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಪ್ರವಾಹದಿಂದ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಈ‌ ಕುರಿತು ಮಾಹಿತಿ ಪಡೆಯಲು ಅಕ್ಟೋಬರ್ 21ರಂದು ಈ ನಾಲ್ಕು ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸುಲಿದ್ದೇನೆ' ಎಂದು ಮುಖ್ಯಮಂತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರವಾಹದಿಂದ ನಾಲ್ಕು ಜಿಲ್ಲೆಗಳ ಹಲವು ಗ್ರಾಮಗಳು ಸಂಪೂರ್ಣ ಮತ್ತು ಭಾಗಶಃ ಮುಳುಗಿವೆ. ಜಿಲ್ಲಾಡಳಿತದಿಂದ ಪರಿಹಾರ ಕಾರ್ಯಾಚರಣೆ ಪ್ರಗತಿಯಲ್ಲಿದೆ. ನೇರವಾಗಿ ಪರಿಸ್ಥಿತಿ ಅರಿಯುವ ಉದ್ದೇಶದಿಂದ ವೈಮಾನಿಕ ಸಮೀಕ್ಷೆ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.