ಬೆಂಗಳೂರು: ಜ್ಞಾನ ಭಾರತಿ ಆವರಣದಲ್ಲಿ ಒಂಬತ್ತು ತಿಂಗಳ ಹಿಂದೆ ನಡೆದ ಅಪಘಾತದಲ್ಲಿ ಮೃತಪಟ್ಟ ಸ್ನಾತಕೋತ್ತರ ವಿದ್ಯಾರ್ಥಿನಿ ಕುಟುಂಬಕ್ಕೆ ₹ 4 ಲಕ್ಷ ಪರಿಹಾರ ನೀಡಲು ಬೆಂಗಳೂರು ವಿಶ್ವವಿದ್ಯಾಲಯ ನಿರ್ಧರಿಸಿದೆ.
ಜ್ಞಾನ ಭಾರತಿ ಆವರಣದ ಹಾಸ್ಟೆಲ್ನಲ್ಲಿದ್ದ ಗಣಿತ ವಿಭಾಗದ ವಿದ್ಯಾರ್ಥಿನಿ ಶಿಲ್ಪಾಶ್ರೀ (22) ಕಳೆದ ಅಕ್ಟೋಬರ್ನಲ್ಲಿ ತರಗತಿಗೆ ಹಾಜರಾಗಲು ಹೊರಟಿದ್ದಾಗ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಗಾಯಗೊಂಡು, ನಂತರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ವಿದ್ಯಾರ್ಥಿನಿಯ ವೈದ್ಯಕೀಯ ವೆಚ್ಚವನ್ನು ಭರಿಸಿದ್ದ ವಿಶ್ವವಿದ್ಯಾನಿಲಯ, ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿತ್ತು. ಜೂನ್ 12ರಂದು ನಡೆದ ಸಿಂಡಿಕೇಟ್ ಸಭೆಯಲ್ಲಿ ಶಿಲ್ಪಾಶ್ರೀ ಕುಟುಂಬಕ್ಕೆ ಪರಿಹಾರ ನೀಡಲು ಒಪ್ಪಿಗೆ ಪಡೆದಿದೆ.
ಘಟನೆಯ ನಂತರ ವಿಶ್ವವಿದ್ಯಾನಿಲಯ 2023-24ರ ಬಜೆಟ್ನಲ್ಲಿ ವಿದ್ಯಾರ್ಥಿಗಳ ಅಪಘಾತ ವೆಚ್ಚಕ್ಕಾಗಿ ₹ 5 ಲಕ್ಷ ಮೀಸಲಿಟ್ಟಿದೆ. ಅಪಘಾತದಂತಹ ಪ್ರಕರಣಗಳು ನಡೆದರೆ ತಕ್ಷಣದ ಚಿಕಿತ್ಸೆಗೆ ಮೀಸಲಿಟ್ಟಿರುವ ಹಣ ಬಳಸಲು ಅನುಮತಿ ನೀಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.