ADVERTISEMENT

ಬಜೆಟ್‌ ಘೋಷಣೆ ಕೈಬಿಡಲು ಎನ್‌ಎಸ್‌ಯುಐ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2019, 19:56 IST
Last Updated 26 ಫೆಬ್ರುವರಿ 2019, 19:56 IST
ವಿದ್ಯಾರ್ಥಿಗಳಿಗೆ ಮಾರಕವಾದ ಬದಲಾವಣೆಗಳನ್ನು ಕೈಬಿಡುವಂತೆ ಆಗ್ರಹಿಸಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಎನ್‌ಎಸ್‌ಯುಐ ರಾಜ್ಯ ಘಟಕದ ಅಧ್ಯಕ್ಷ ಎನ್‌.ಎಸ್‌. ಮಂಜುನಾಥ್‌ ನೇತೃತ್ವದ ನಿಯೋಗ ಮನವಿ ಸಲ್ಲಿಸಿತು
ವಿದ್ಯಾರ್ಥಿಗಳಿಗೆ ಮಾರಕವಾದ ಬದಲಾವಣೆಗಳನ್ನು ಕೈಬಿಡುವಂತೆ ಆಗ್ರಹಿಸಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಎನ್‌ಎಸ್‌ಯುಐ ರಾಜ್ಯ ಘಟಕದ ಅಧ್ಯಕ್ಷ ಎನ್‌.ಎಸ್‌. ಮಂಜುನಾಥ್‌ ನೇತೃತ್ವದ ನಿಯೋಗ ಮನವಿ ಸಲ್ಲಿಸಿತು   

ಬೆಂಗಳೂರು: ಆನ್‌ಲೈನ್‌ನಲ್ಲಿ ಮಾತ್ರ ಪ್ರಮಾಣಪತ್ರ ವಿತರಿಸುವ ವ್ಯವಸ್ಥೆಯು ಯುಜಿಸಿ (ವಿಶ್ವವಿದ್ಯಾಲಯ ಅನುದಾನ ಆಯೋಗದ) ನಿರ್ದೇಶನಗಳಿಗೆ ವಿರುದ್ಧವಾಗಿದೆ.

ಹೀಗಾಗಿ, ಬಜೆಟ್‌ನಲ್ಲಿ ಘೋಷಣೆ ಮಾಡಿರುವ ಈ ಯೋಜನೆಯನ್ನು ಕೈಬಿಡಬೇಕು’ ಎಂದು ಆಗ್ರಹಿಸಿ ಎನ್‌ಎಸ್‌ಯುಐ ರಾಜ್ಯ ಘಟಕದ ಅಧ್ಯಕ್ಷ ಎನ್‌.ಎಸ್‌. ಮಂಜುನಾಥ್‌ ನೇತೃತ್ವದ ನಿಯೋಗ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಮನವಿ ಸಲ್ಲಿಸಿತು.

ಯುಜಿಸಿ ಉಚಿತವಾಗಿ ಲಭ್ಯವಿರುವ ಡಿಜಿಟಲ್‌ ಪ್ರಮಾಣ ಪತ್ರಗಳ ಕೋಶವನ್ನು ಆರಂಭಿಸಿದೆ. ಇದೇ ರೀತಿಯ ಇನ್ನೊಂದು ಕೋಶ ಆರಂಭಿಸಿ, ವಿದ್ಯಾರ್ಥಿಗಳಿಂದ ಪ್ರತ್ಯೇಕ ಶುಲ್ಕ ಸಂಗ್ರಹಿಸುವ ಅಗತ್ಯ ಇಲ್ಲ. ಅಲ್ಲದೆ, ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರ ಪ್ರಮಾಣ ಪತ್ರಗಳಲ್ಲಿ ಆಧಾರ್‌ ಬಳಸಬಾರದು ಎಂದು ಯುಜಿಸಿ ಎಲ್ಲ ವಿಶ್ವವಿದ್ಯಾಲಯಗಳಿಗೆ ನಿರ್ದೇಶನ ನೀಡಿದೆ ಎಂದೂ ಮನವಿಯಲ್ಲಿ ನಿಯೋಗ ಉಲ್ಲೇಖಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.