ADVERTISEMENT

ಬಸ್ ಡಿಕ್ಕಿ: ಬೈಕ್‌ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 23 ಜನವರಿ 2020, 22:44 IST
Last Updated 23 ಜನವರಿ 2020, 22:44 IST

ಬೆಂಗಳೂರು: ಬಿಎಂಟಿಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸುಮ್ಮನಹಳ್ಳಿ ಜಂಕ್ಷನ್‌ನಲ್ಲಿ ಗುರುವಾರ ಸಂಜೆ 5 ಗಂಟೆ ಸುಮಾರಿಗೆ ನಡೆದಿದೆ.

ಉಲ್ಲಾಳು ನಿವಾಸಿ ಶಿವಕುಮಾರ್ (45) ಮೃತರು. ಘಟನೆ ಸಂಬಂಧ ಬಿಎಂಟಿಸಿ ಚಾಲಕ ರಾಜೇಂದ್ರ ಎಂಬುವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಶಿವಕುಮಾರ್ ಅವರು ಜಲಮಂಡಳಿ ಗುತ್ತಿಗೆದಾರರಾಗಿದ್ದಾರೆ. ದ್ವಿಚಕ್ರ ವಾಹನದಲ್ಲಿ ಮಾಳಗಾಳದ ಸರ್ವೀಸ್ ರಸ್ತೆ ಮಾರ್ಗವಾಗಿ ಬಂದಿದ್ದ ರಾಜೇಂದ್ರ ಅವರು ಸ್ನೇಹಿತರೊಬ್ಬರಿಗೆ ಸುಮ್ಮನಹಳ್ಳಿ ಜಂಕ್ಷನ್ ಕಡೆ ಬಳಿ ಕಾಯುತ್ತಾ ನಿಂತಿದ್ದರು. ಈ ವೇಳೆ ವೇಗವಾಗಿ ಬಂದ ಬನಶಂಕರಿಯಿಂದ ಯಶವಂತಪುರ ಕಡೆ ಹೋಗುವ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಕಾಮಾಕ್ಷಿಪಾಳ್ಯ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.