ADVERTISEMENT

ಬಸ್‌, ಲಾರಿ, ವ್ಯಾನ್‌ ಅಪಘಾತ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2019, 12:04 IST
Last Updated 18 ಫೆಬ್ರುವರಿ 2019, 12:04 IST
ನಿಯಂತ್ರಣ ತಪ್ಪಿ ಹಳ್ಳದಲ್ಲಿ ನಿಂತ ಬಸ್‌
ನಿಯಂತ್ರಣ ತಪ್ಪಿ ಹಳ್ಳದಲ್ಲಿ ನಿಂತ ಬಸ್‌   

ದಾಬಸ್‌ಪೇಟೆ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 4ರ ಹಳೇ ನಿಜಗಲ್ ಗೇಟ್ ಬಳಿ ಭಾನುವಾರ ಮುಂಜಾನೆ ಎಸ್‌ಆರ್‌ಎಸ್‌ ಬಸ್, ಲಾರಿ ಮತ್ತು ಮಾರುತಿ ವ್ಯಾನ್ ನಡುವೆ ಅಪಘಾತ ಸಂಭವಿಸಿ ಹಲವರು ಗಾಯಗೊಂಡಿದ್ದಾರೆ.

ಎಸ್‌ಆರ್‌ಎಸ್‌ ಕಂಪನಿಯ ಬಸ್ ಬೆಂಗಳೂರಿನ ಕಡೆ ಬರುತ್ತಿತ್ತು. ನಿಯಂತ್ರಣ ತಪ್ಪಿದ ಬಸ್‌ ಜೆಸಿಬಿ ತುಂಬಿಕೊಂಡು ಹೋಗುತ್ತಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದೆ. ಪಕ್ಕದಲ್ಲಿ ಸಂಚರಿಸುತ್ತಿದ್ದ ಮಾರುತಿ ವ್ಯಾನ್‌ಗೆ ಗುದ್ದಿ ಹಳ್ಳಕ್ಕೆ ಹೋಗಿ ನಿಂತಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ 10 ಮಂದಿ ಹಾಗೂ ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT