ADVERTISEMENT

ಬಸ್‌ಗಳಲ್ಲಿ ಕಳ್ಳತನ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2022, 18:08 IST
Last Updated 25 ನವೆಂಬರ್ 2022, 18:08 IST

ಬೆಂಗಳೂರು: ‍ಪ್ರಯಾಣಿಕರ ಸೋಗಿನಲ್ಲಿ ಬಸ್‌ಗಳಲ್ಲಿ ಸಂಚರಿಸಿ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕಲಾಸಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.

‘ಅಬ್ದುಲ್ ರಹೀಂಖಾನ್ (27) ಹಾಗೂ ಮಣಿ (21) ಬಂಧಿತರು. ಇವರಿಂದ ₹ 1.20 ಲಕ್ಷ ಮೌಲ್ಯದ ಚಿನ್ನಾಭರಣ, ನಾಲ್ಕು ಮೊಬೈಲ್ ಹಾಗೂ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಬಸ್‌ಗಳಲ್ಲಿ ಸುತ್ತಾಡುತ್ತಿದ್ದ ಆರೋಪಿಗಳು, ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಚಿನ್ನಾಭರಣ ಹಾಗೂ ಮೊಬೈಲ್ ಕದಿಯುತ್ತಿದ್ದರು. ತಂಗುದಾಣಗಳಲ್ಲಿ ಇಳಿದು ಪರಾರಿಯಾಗುತ್ತಿದ್ದರು. ಉಪ್ಪಾರಪೇಟೆ, ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ಆರೋಪಿಗಳು ಕೃತ್ಯ ಎಸಗಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.