ADVERTISEMENT

‘ತುಂಗಾನಗರದಲ್ಲಿ ಶೀಘ್ರವೇ ರಸ್ತೆ ಮರು ನಿರ್ಮಾಣ’

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2022, 3:33 IST
Last Updated 9 ಏಪ್ರಿಲ್ 2022, 3:33 IST

ಬೆಂಗಳೂರು: ತುಂಗಾನಗರದಲ್ಲಿ ಕೊಳವೆ ಅಳವಡಿಸುವ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಿ ಡಾಂಬರ್ ರಸ್ತೆ ಮರು ನಿರ್ಮಾಣ ಮಾಡಲಾಗುವುದು ಎಂದು ಜಲ ಮಂಡಳಿ ಸ್ಪಷ್ಟಪಡಿಸಿದೆ.

‘ಪ್ರಜಾವಾಣಿ’ಯಲ್ಲಿ ಶುಕ್ರವಾರ ಪ್ರಕಟವಾದ ‘ಕಾವೇರಿಯಿಂದ ತುಂಗಾನಗರದ ನೆಮ್ಮದಿ ಭಂಗ’ ಎಂಬ ವರದಿಗೆ ಪ್ರತಿಕ್ರಿಯೆ ನೀಡಿರುವ ಜಲ ಮಂಡಳಿ, ‘ಕಾವೇರಿ 5ನೇ ಹಂತದ ಯೋಜನೆಯಡಿ ಪೈಪ್‌ಲೈನ್ ಅಳವಡಿಕೆ ಮಾಡಲಾಗುತ್ತಿದೆ. ತುಂಗಾನಗರ ಮುಖ್ಯರಸ್ತೆಯಲ್ಲಿ ಕಾಮಗಾರಿಯುತ್ವರಿತಗತಿಯಲ್ಲಿ ಪ್ರಗತಿ ಹಂತದಲ್ಲಿದ್ದು, ಸಮಾನಾಂತರವಾಗಿ ರಸ್ತೆ ಮರು ನಿರ್ಮಾಣ ಕಾಮಗಾರಿ ಸಹ ಕೈಗೊಳ್ಳಲಾಗುತ್ತಿದೆ. ದೂಳು ತುಂಬಿಕೊಳ್ಳುತ್ತಿರುವುದನ್ನು ತಡೆಯಲು ನಿರಂತರವಾಗಿ ನೀರು ಸಿಂಪರಣೆ ಮಾಡಲಾಗುತ್ತಿದೆ’ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT