ADVERTISEMENT

ಅನುಕಂಪದ ಮಾತುಗಳಿಂದ ಬೆಂಕಿ ಹಚ್ಚುವ ಯತ್ನ: ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2023, 4:46 IST
Last Updated 9 ಫೆಬ್ರುವರಿ 2023, 4:46 IST
ಬಿ.ವೈ ವಿಜಯೇಂದ್ರ
ಬಿ.ವೈ ವಿಜಯೇಂದ್ರ    

ಬೆಂಗಳೂರು: ‘ಬಿ.ಎಸ್‌.ಯಡಿಯೂರಪ್ಪ ಅವರ ಬಗ್ಗೆ ಅನುಕಂಪದ ಮಾತುಗಳ ನ್ನಾಡುವ ಮೂಲಕ ನಮ್ಮ ಪಕ್ಷದಲ್ಲಿ ಬೆಂಕಿ ಹಚ್ಚಲು ಕೆಲವರು ಪ್ರಯತ್ನ ಮಾಡುತ್ತಿದ್ದಾರೆ. ಅವುಗಳಿಗೆ ಆಸ್ಪದ ನೀಡುವ ಪ್ರಶ್ನೆಯೇ ಇಲ್ಲ’ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು, ‘ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ಕನಿಷ್ಠ 140 ರಿಂದ 150 ಶಾಸಕರನ್ನು ಗೆಲ್ಲಿಸುವುದೇ ನಮ್ಮೆಲ್ಲ ಗುರಿಯಾಗಿದೆ’ ಎಂದು ಹೇಳಿದರು. ‘ಸಿದ್ದರಾಮಯ್ಯ ಅಧಿಕಾರದಲ್ಲಿ ಇದ್ದಾಗ ವೀರಶೈವ ಸಮಾಜದ ಕುರಿತು ಯಾರ್‍ಯಾರು ಯಾವ ರೀತಿ ನಡೆದುಕೊಂಡಿದ್ದಾರೆ ಎಂಬುದು ಗೊತ್ತಿದೆ. ಆದ್ದರಿಂದ ಸಿದ್ದರಾಮಯ್ಯ ಅವರ ಹೇಳಿಕೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ’ ಎಂದರು.

ಕುಮಾರಸ್ವಾಮಿಯವರು ದಿವಾಳಿಯಾಗಿದ್ದಾರೆ. ಜನರ ಮನಸ್ಸನ್ನು ತಮ್ಮ ಕಡೆ ಸೆಳೆಯಲು ಅವರ ಬಳಿ ಅಸ್ತ್ರಗಳಿಲ್ಲ. ಅದಕ್ಕಾಗಿ ಹೀಗೆ
ಮಾತನಾಡುತ್ತಿದ್ದಾರೆ. ಅವುಗಳಿಗೆ ರಾಜ್ಯದ ಜನರು ಅವಕಾಶ ಮಾಡಿಕೊಡುವುದಿಲ್ಲ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.