ಬೆಂಗಳೂರು: ನಾಗರಿಕ ಸೌಲಭ್ಯ (ಸಿ.ಎ) ಅಥವಾ ಸಾರ್ವಜನಿಕ ಉದ್ದೇಶಕ್ಕೆ ಮೀಸಲಿರುವ ನಿವೇಶನದಲ್ಲಿ ಮಾಜಿ ಮೇಯರ್ ವೆಂಕಟೇಶ
ಮೂರ್ತಿ ನಿರಾತಂಕವಾಗಿ ವಾಣಿಜ್ಯ ಮಳಿಗೆ ನಿರ್ಮಿಸುತ್ತಿದ್ದಾರೆ.
ಈ ಕುರಿತು ‘ಪ್ರಜಾವಾಣಿ’ ಶುಕ್ರವಾರ ವರದಿ ಪ್ರಕಟಿಸಿತ್ತು. ನಂತರವೂ, ಈ ಕಾಮಗಾರಿ ಸ್ಥಗಿತಗೊಳಿಸುವ ಅಥವಾ ಯಾವುದೇ ಕ್ರಮ ಜರುಗಿಸಲು ಬಿಡಿಎ ಅಧಿಕಾರಿಗಳು ಮುಂದಾಗಿಲ್ಲ.
‘ಪದ್ಮನಾಭನಗರದ 18ನೇ ಮುಖ್ಯರಸ್ತೆಯಲ್ಲಿನ ರಾಯಲ್ ಮಾರ್ಟ್ ಎದುರಿನ ಸಿಎ–8 ನಿವೇಶನದಲ್ಲಿ ವೆಂಕಟೇಶಮೂರ್ತಿ 12 ವಾಣಿಜ್ಯ ಮಳಿಗೆ ನಿರ್ಮಿಸುತ್ತಿದ್ದಾರೆ. ಬೇರೆ ಪಕ್ಷದ ಸ್ಥಳೀಯ ಮುಖಂಡರು ಈ ಕಾರ್ಯಕ್ಕೆ ಬೆಂಬಲವಾಗಿ ನಿಂತಿದ್ದಾರೆ. ಹಾಗಾಗಿ, ಕಾಮಗಾರಿ ನಿರಾತಂಕವಾಗಿ ಸಾಗಿದೆ’ ಎಂದು ಸ್ಥಳೀಯರೊಬ್ಬರು ದೂರಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.