ADVERTISEMENT

ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆ ಇಲ್ಲ?

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2018, 19:37 IST
Last Updated 22 ನವೆಂಬರ್ 2018, 19:37 IST
ಡಾ.ಜಿ.ಪರಮೇಶ್ವರ
ಡಾ.ಜಿ.ಪರಮೇಶ್ವರ   

ಬೆಂಗಳೂರು: ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನಕ್ಕೂ‌ (ಡಿ.10) ಮುನ್ನ ಸಂಪುಟ ವಿಸ್ತರಣೆ ಸಾಧ್ಯತೆ ಇಲ್ಲ.

'ಅಧಿವೇಶನಕ್ಕೂ‌ ಮೊದಲೇ ಸಂಪುಟ ವಿಸ್ತರಿಸಬೇಕೆಂಬುದು ನಮ್ಮ ಉದ್ದೇಶ. ಈ ಕುರಿತು ಪಕ್ಷದ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಬಳಿ ಚರ್ಚೆ ನಡೆಸಿದ್ದೇವೆ' ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಹೇಳಿದರು.

‘ಈ ವಿಚಾರದಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ಚರ್ಚೆ ನಡೆಸಿದ ಬಳಿಕ ವೇಣುಗೋಪಾಲ್ ಮಾಹಿತಿ ನೀಡಲಿದ್ದಾರೆ. ಆದರೆ, ರಾಹುಲ್ ಗಾಂಧಿ ಪಂಚ ರಾಜ್ಯಗಳ ಚುನಾವಣಾ ಪ್ರಚಾರದಲ್ಲಿದ್ದಾರೆ. ಹೀಗಾಗಿ ಅವರಿಬ್ಬರ ಭೇಟಿ ಸಾಧ್ಯವಾಗಿಲ್ಲ. ರಾಹುಲ್ ಹಸಿರುನಿಶಾನೆ ನೀಡಿದ ತಕ್ಷಣ ಸಂಪುಟ ವಿಸ್ತರಣೆ ಮಾಡುತ್ತೇವೆ' ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.