ADVERTISEMENT

‘ವಿದ್ಯಾರ್ಥಿಗಳ ಮೇಲೆ ಹಲ್ಲೆ: ಕಾನೂನು ಕ್ರಮಕ್ಕೆ ಒತ್ತಾಯ’

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2021, 19:42 IST
Last Updated 15 ಸೆಪ್ಟೆಂಬರ್ 2021, 19:42 IST

ಬೆಂಗಳೂರು: ‘ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿ ಚಾರ್ಜ್‌ ಕುರಿತು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸಿದೆ.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಅತಾವುಲ್ಲಾ ಪುಂಜಾಲಕಟ್ಟೆ ಮಾತನಾಡಿ, ‘ಪ್ರತಿಭಟಿಸುವ ಹಕ್ಕನ್ನು ಧಮನಿಸುವ ರಾಜ್ಯ ಸರ್ಕಾರದ ನಡೆ ಖಂಡನೀಯ. ವಿದ್ಯಾರ್ಥಿಗಳ ಮೇಲೆ ಏಕಾಏಕಿ ಪೊಲೀಸರು ಲಾಠಿ ಬೀಸಿ, ದೌರ್ಜನ್ಯ ನಡೆಸಿದ್ದಾರೆ. ಪ್ರತಿಭಟನನಿರತ ಹಲವಾರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿದ್ದು, ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ಇದಾಗಿದೆ’ ಎಂದು ಹೇಳಿದರು.

‘ಈ ಹಿಂದೆ ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡಿ, ರಾಷ್ಟ್ರೀಯ ಶಿಕ್ಷಣ ನೀತಿಯ ಲೋಪದೋಷಗಳ ಕರಡು ಪ್ರತಿಯನ್ನು ನೀಡಲಾಗಿದೆ. ವಿಧಾನಸೌಧ ಮುತ್ತಿಗೆ ನಡೆಸುವ ಬಗ್ಗೆ ಈ ಮೊದಲೇ ಸುದ್ದಿಗೋಷ್ಠಿ ಕರೆದು, ತಿಳಿಸಲಾಗಿತ್ತು. ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದು, ಪ್ರತಿಭಟನೆಗೆ ಮುಂದಾದಾಗ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿದೆ. ಪೊಲೀಸರು ಯುವತಿಯರನ್ನೂ ಎಳೆದಾಡಿದ್ದಾರೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.