ADVERTISEMENT

ಕೆನರಾ ಬ್ಯಾಂಕ್‌ನ ರಾಷ್ಟ್ರಮಟ್ಟದ ರಸಪ್ರಶ್ನೆ ಕಾರ್ಯಕ್ರಮ 21ರಂದು

​ಪ್ರಜಾವಾಣಿ ವಾರ್ತೆ
Published 11 ಜುಲೈ 2019, 20:24 IST
Last Updated 11 ಜುಲೈ 2019, 20:24 IST

ಬೆಂಗಳೂರು: ಕೆನರಾ ಬ್ಯಾಂಕ್‌ನ ರಾಷ್ಟ್ರ ಮಟ್ಟದ ರಸಪ್ರಶ್ನೆ ಕಾರ್ಯಕ್ರಮ ‘ಕೆನರಾ ನಾಲೆಡ್ಜ್ ಚಾಂಪ್–2019’ ಇದೇ 21ರಂದು ಸೆಂಟ್ರಲ್‌ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಲಿದೆ.

ನಗರದ ಸುತ್ತಮುತ್ತಲ ಶಾಲೆಗಳ 8ರಿಂದ 11ನೇ ತರಗತಿವರೆಗಿನ ವಿದ್ಯಾರ್ಥಿಗಳು ಭಾಗವಹಿಸಬಹುದು. ಪ್ರತಿ ಶಾಲೆಯಿಂದ ತಲಾ ಇಬ್ಬರು ವಿದ್ಯಾರ್ಥಿಗಳನ್ನು ಒಳಗೊಂಡ ಗರಿಷ್ಠ ಎರಡು ತಂಡಗಳುಸ್ಪರ್ಧೆಯಲ್ಲಿ ಭಾಗವಹಿಸಬಹುದು. ವಿಜೇತರಿಗೆ ಪ್ರಥಮ ಬಹುಮಾನವಾಗಿ ₹50 ಸಾವಿರ, ದ್ವಿತೀಯ ಬಹುಮಾನ ₹30 ಸಾವಿರ ಮತ್ತು ಮೂರನೇ ಬಹುಮಾನ ₹20 ಸಾವಿರ ನೀಡಲಾಗುವುದು.

ಆಸಕ್ತ ವಿದ್ಯಾರ್ಥಿಗಳು ಶಾಲೆಗಳ ಮೂಲಕ ಕೆನರಾ ಬ್ಯಾಂಕ್‌ನ ಸ್ಥಳೀಯ ಶಾಖೆಗಳಲ್ಲಿ ಜು. 17ರ ಸಂಜೆ 5 ಗಂಟೆ ತನಕ ಅರ್ಜಿ ಸಲ್ಲಿಸಬಹುದು.

ADVERTISEMENT

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 080–22273275, 91-9630041234 ಸಂಪರ್ಕಿಸಬಹುದು ಎಂದು ಬ್ಯಾಂಕ್ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.