ಬೆಂಗಳೂರು: ಕೊರೊನಾ ವೈರಾಣು ಹರಡುವಿಕೆ ತಡೆಗಾಗಿ ದೇಶದಾದ್ಯಂತ ಲಾಕ್ಡೌನ್ ಮಾಡಲಾಗಿದೆ. ಇಂದು ರಾತ್ರಿ 9 ಗಂಟೆಗೆ 9 ನಿಮಿಷ ದೀಪ ಹಚ್ಚುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದು, ಇದೇ ನೆಪದಲ್ಲಿ ಜನ ಮನೆಯಿಂದ ಹೊರಗೆ ಬಂದು ಗುಂಪು ಸೇರುವಂತಿಲ್ಲವೆಂದು ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಎಚ್ಚರಿಸಿದ್ದಾರೆ.
ದೀಪ ಹಚ್ಚುವ ನೆಪದಲ್ಲಿ ಯಾರಾದರೂ ಮನೆಯಿಂದ ಹೊರಗೆ ಬಂದು ಗುಂಪು ಸೇರಿದರೆ, ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆಯೂ ಎಲ್ಲ ಠಾಣೆಗಳ ಪೊಲೀಸರಿಗೆ ಭಾಸ್ಕರ್ ರಾವ್ ಸಂದೇಶ ರವಾನಿಸಿರುವುದಾಗಿ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.