ADVERTISEMENT

ಗಾಯಾಳು ಕರೆದೊಯ್ಯಲು ಹಿಂದೇಟು

ಪೊಲೀಸ್ ಅಧಿಕಾರಿಯ ಕಾರು ಚಾಲಕನ ವಿರುದ್ಧ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2019, 20:13 IST
Last Updated 14 ಅಕ್ಟೋಬರ್ 2019, 20:13 IST
ಅಪಘಾತ ಸ್ಥಳಕ್ಕೆ ಬಂದಿದ್ದ ಪೊಲೀಸ್ ಅಧಿಕಾರಿ ಕಾರು
ಅಪಘಾತ ಸ್ಥಳಕ್ಕೆ ಬಂದಿದ್ದ ಪೊಲೀಸ್ ಅಧಿಕಾರಿ ಕಾರು   

ಬೆಂಗಳೂರು: ಅಪಘಾತದಲ್ಲಿ ಗಾಯಗೊಂಡು ರಸ್ತೆಯಲ್ಲಿ ಬಿದ್ದು ನರಳಾಡುತ್ತಿದ್ದ ಯುವತಿಯನ್ನು ಆಸ್ಪತ್ರೆಗೆ ಕರೆದೊಯ್ಯಲು ಪೊಲೀಸ್ ಅಧಿಕಾರಿಯೊಬ್ಬರ ಕಾರಿನ ಚಾಲಕ ಹಿಂದೇಟು ಹಾಕಿದ್ದು, ಚಾಲಕನ ಈ ವರ್ತನೆಗೆ ಸಾರ್ವಜನಿಕರು ಆಕ್ರೋಶಕ್ಕೆ
ವ್ಯಕ್ತಪಡಿಸಿದ್ದಾರೆ.

ಸೋಮವಾರ ಮಧ್ಯಾಹ್ನ ನಡೆದ ಘಟನೆಯ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್‌ ಮಾಡಿರುವ ಸಾರ್ವಜನಿಕರು, ಕಾರು (ಕೆಎ 01 ಜಿ 5958) ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

‘ಯುವತಿಯೊಬ್ಬರು ದ್ವಿಚಕ್ರ ವಾಹನ ಚಲಾಯಿಸಿಕೊಂಡು ಸಿರ್ಸಿ ವೃತ್ತದ ಮೇಲ್ಸೇತುವೆಯಲ್ಲಿ ತೆರಳುತ್ತಿದ್ದರು. ಇದೇ ವೇಳೆ ಅಪಘಾತ ಸಂಭವಿಸಿತ್ತು. ದ್ವಿಚಕ್ರ ವಾಹನ ಉರುಳಿ ಬಿದ್ದಿತ್ತು. ರಸ್ತೆಯಲ್ಲೇ ಬಿದ್ದು ಯುವತಿ ನರಳಾಡುತ್ತಿದ್ದರು. ರಕ್ಷಣೆಗೆ ಬಂದ ಸಾರ್ವಜನಿಕರು, ನೀರು ಕುಡಿಸಿದ್ದರು’ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದರು.

ADVERTISEMENT

‘ಮೇಲ್ಸೇತುವೆಯಲ್ಲಿ ಹೊರಟಿದ್ದ ಪೊಲೀಸ್ ಅಧಿಕಾರಿಯೊಬ್ಬರ ಕಾರು ನಿಲ್ಲಿಸಿ, ಗಾಯಾಳುವನ್ನು ಆಸ್ಪತ್ರೆಗೆ ಕರೆ
ದೊಯ್ಯಲು ಸಹಾಯ ಮಾಡುವಂತೆ ಸಾರ್ವಜನಿಕರು ಕೋರಿದ್ದರು. ಇದನ್ನು ನಿರಾಕರಿಸಿದ್ದ ಚಾಲಕ, ಸ್ಥಳದಿಂದ ಹೊರಟ. ತಡೆಯಲು ಯತ್ನಿಸಿದರೂ ಪ್ರಯೋಜನವಾಗಲಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.