ADVERTISEMENT

ಮದ್ಯದ ಅಮಲಿನಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ: ಆಟೊ ಜಖಂ

​ಪ್ರಜಾವಾಣಿ ವಾರ್ತೆ
Published 12 ಜೂನ್ 2020, 8:23 IST
Last Updated 12 ಜೂನ್ 2020, 8:23 IST
ಆಟೊಗೆ ಡಿಕ್ಕಿ ಹೊಡೆದ ನಂತರ ಕಟ್ಟಡವೊಂದಕ್ಕೆ ಗುದ್ದಿರುವ ಕಾರು
ಆಟೊಗೆ ಡಿಕ್ಕಿ ಹೊಡೆದ ನಂತರ ಕಟ್ಟಡವೊಂದಕ್ಕೆ ಗುದ್ದಿರುವ ಕಾರು    

ಬೆಂಗಳೂರು: ಮಲ್ಲೇಶ್ವರದಲ್ಲಿ ಯುವಕನೊಬ್ಬ ಕುಡಿದ ಅಮಲಿನಲ್ಲಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿ ಆಟೊಗೆ ಗುದ್ದಿಸಿದ್ದಾನೆ.

ಮಲ್ಲೇಶ್ವರ ವೃತ್ತದಲ್ಲಿ ಗುರುವಾರ ತಡರಾತ್ರಿ ಈ ಘಟನೆ ನಡೆದಿದೆ. ಯುವಕ ಹಾಗೂ ಆತನ ಜೊತೆಗಿದ್ದ ಯುವಕರು, ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

ಆಟೊ ಚಾಲಕನ ಸ್ಥಿತಿ ಗಂಭೀರವಾಗಿದ್ದು, ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲ್ಲೇಶ್ವರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

'ವೇಗವಾಗಿ ಬಂದಿದ್ದ ಕಾರು ಆಟೊಗೆ ಗುದ್ದಿ ಉಜ್ಜಿಕೊಂಡು ಹೋಗಿದೆ. ನಂತರ, ಪಾದಚಾರಿ ಮಾರ್ಗ ಏರಿ ಗೋಡೆಗೆ ಡಿಕ್ಕಿ ಹೊಡೆದಿದೆ. ಸ್ಥಳೀಯರು ಸ್ಥಳದಲ್ಲಿ ಸೇರುತ್ತಿದ್ದಂತೆ ಯುವಕರು ಓಡಿಹೋಗಿದ್ದಾರೆ. ಯುವಕರು ಕುಡಿದ ಅಮಲಿನಲ್ಲಿದ್ದರು ಎಂಬುದಾಗಿ ಸ್ಥಳೀಯರು ಹೇಳಿಕೆ ನೀಡಿದ್ದಾರೆ' ಎಂದು ಮಲ್ಲೇಶ್ವರ ಸಂಚಾರ ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.