ADVERTISEMENT

ಕಾರಿಗೆ ಬೆಂಕಿ: ಮೂವರು ಪಾರು

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2020, 19:55 IST
Last Updated 18 ಅಕ್ಟೋಬರ್ 2020, 19:55 IST

ಬೆಂಗಳೂರು: ಪಂತರಪಾಳ್ಯಸಮೀಪ ಭಾನುವಾರ ಬೆಂಕಿ ತಗುಲಿ ಕಾರೊಂದು ಸುಟ್ಟಿದ್ದು, ಕಾರಿನಲ್ಲಿದ್ದ ಮೂವರು ಅಪಾಯದಿಂದ ಪಾರಾಗಿದ್ದಾರೆ.

‘ಚಂದ್ರಾಲೇಔಟ್ ನಿವಾಸಿ ನಿರಂಜನ್ ಎಂಬುವರು ತಾಯಿ ಮತ್ತು ಪತ್ನಿ ಜತೆ ಭಾನುವಾರ ಬೆಳಿಗ್ಗೆ ಕಾರಿನಲ್ಲಿ ರಾಮನಗರಕ್ಕೆ ತೆರಳುತ್ತಿದ್ದರು. ಬೆಳಿಗ್ಗೆ 9 ಗಂಟೆಗೆ ಪಂತರಪಾಳ್ಯ ಬಳಿ ಕಾರಿನ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿತ್ತು. ಕಾರು ನಿಲ್ಲಿಸಿ ನೋಡುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿತ್ತು’ ಎಂದು ಬ್ಯಾಟರಾಯಪುರ ಪೊಲೀಸರು ಹೇಳಿದರು.

‘ಬೆಂಕಿ ಹೆಚ್ಚಾಗುತ್ತಿದ್ದಂತೆ ನಿರಂಜನ್ ಅವರು ತಮ್ಮ ತಾಯಿ ಮತ್ತು ಪತ್ನಿಯನ್ನು ಕಾರಿನಿಂದ ಕೆಳಗೆ ಇಳಿಸಿದ್ದರು. ನಂತರ, ಕಾರು ಸಂಪೂರ್ಣ ಸುಟ್ಟಿತು. ಎಂಜಿನ್‌ನಲ್ಲಿ ಶಾರ್ಟ್‌ ಸರ್ಕೀಟ್‌ನಿಂದ ಅವಘಡ ಸಂಭವಿಸಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ’ ಎಂದೂ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.