ADVERTISEMENT

ಸಿಎಆರ್ ಕಾನ್‌ಸ್ಟೆಬಲ್ ಪತ್ನಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 24 ಜುಲೈ 2020, 20:49 IST
Last Updated 24 ಜುಲೈ 2020, 20:49 IST

ಬೆಂಗಳೂರು: ಆಡುಗೋಡಿಯಲ್ಲಿರುವ ನಗರ ಸಶಸ್ತ್ರ ಮೀಸಲು ಪೊಲೀಸ್ ಪಡೆ (ಸಿಎಆರ್) ವಸತಿಗೃಹದಲ್ಲಿ ಅರುಣಾ (34) ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಅರುಣಾ ಅವರ ಪತಿ, ಸಿಎಆರ್ ಕಾನ್‌ಸ್ಟೆಬಲ್ ಆಗಿ ಕೆಲಸ ಮಾಡುತ್ತಿದ್ದಾರೆ. ತಾವು ವಾಸವಿದ್ದ ಮನೆಯಲ್ಲೇ ನೇಣು ಬಿಗಿದುಕೊಂಡು ಅರುಣಾ ಆತ್ಮಹತ್ಯೆಗೆ ಶರಣಾಗಿದ್ದಾರೆ’ ಎಂದು ಆಡುಗೋಡಿ ಪೊಲೀಸರು ಹೇಳಿದರು.

‘ಹಲವು ದಿನಗಳಿಂದ ಅರುಣಾ ಅವರು ಮಾನಸಿಕವಾಗಿ ನೊಂದಿದ್ದರು ಎಂದು ಗೊತ್ತಾಗಿದೆ. ಸಂಬಂಧಿಕರು ನೀಡುವ ದೂರು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದೂ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.