ADVERTISEMENT

‘ಹೊಂಡಾ ಅಮೇಜ್’ ಕಾರಿಗೆ ಬೆಂಕಿ: ಚಾಲಕ ಪಾರು

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2021, 15:43 IST
Last Updated 28 ಸೆಪ್ಟೆಂಬರ್ 2021, 15:43 IST
ಉತ್ತರಹಳ್ಳಿ–ದೊಡ್ಡಬಸ್ತಿ ಮುಖ್ಯರಸ್ತೆಯಲ್ಲಿ ಬೆಂಕಿ ಹೊತ್ತಿಕೊಂಡು ಕಾರು ಸುಟ್ಟಿರುವುದು
ಉತ್ತರಹಳ್ಳಿ–ದೊಡ್ಡಬಸ್ತಿ ಮುಖ್ಯರಸ್ತೆಯಲ್ಲಿ ಬೆಂಕಿ ಹೊತ್ತಿಕೊಂಡು ಕಾರು ಸುಟ್ಟಿರುವುದು   

ಬೆಂಗಳೂರು: ಜ್ಞಾನಭಾರತಿ ಠಾಣೆ ವ್ಯಾಪ್ತಿಯಲ್ಲಿ ಚಲಿಸುತ್ತಿದ್ದ 'ಹೊಂಡಾ ಅಮೇಜ್' ಕಾರಿಗೆ ಬೆಂಕಿ ತಗುಲಿದ್ದು, ನಡುರಸ್ತೆಯಲ್ಲೇ ಕಾರು ಹೊತ್ತಿ ಉರಿದಿದೆ. ಬೆಂಕಿ ಕಾಣುತ್ತಿದ್ದಂತೆ ಕಾರಿನಿಂದ ಇಳಿದು ಚಾಲಕ ನಟರಾಜ್ (29) ಅಪಾಯದಿಂದ ಪಾರಾಗಿದ್ದಾರೆ.

‘ಉತ್ತರಹಳ್ಳಿಯ ನಟರಾಜ್, ಸಂಬಂಧಿಕರನ್ನು ನೋಡಲು ಹೊಂಡಾ ಅಮೇಜ್ ಕಾರಿನಲ್ಲಿ ಹೊರಟಿದ್ದರು. ದೊಡ್ಡಬಸ್ತಿ ಮುಖ್ಯರಸ್ತೆಯಲ್ಲಿ ಕಾರಿನಲ್ಲಿ ಹೊಗೆ ಕಾಣಿಸಿಕೊಂಡು ಬೆಂಕಿ ಹೊತ್ತಿ ಉರಿಯಲಾರಂಭಿಸಿತ್ತು. ಗಾಬರಿಗೊಂಡ ನಟರಾಜ್, ಕಾರನ್ನು ರಸ್ತೆಯಲ್ಲೇ ನಿಲ್ಲಿಸಿ ಇಳಿದಿದ್ದರು’ ಎಂದು ಪೊಲೀಸರು ಹೇಳಿದರು.

‘ಸ್ಥಳಕ್ಕೆ ಹೋಗಿದ್ದ ಗಸ್ತು ಸಿಬ್ಬಂದಿ, ಕಾರಿನ ಬಳಿ ಸಾರ್ವಜನಿಕರ ಓಡಾಟವನ್ನು ನಿರ್ಬಂಧಿಸಿದ್ದರು. ನಾಗರಬಾವಿ ಅಗ್ನಿಶಾಮಕ ದಳದ ಸಿಬ್ಬಂದಿ ಕಾರಿಗೆ ತಗುಲಿದ್ದ ಬೆಂಕಿ ನಂದಿಸಿದರು. ಅಷ್ಟರಲ್ಲೇ ಕಾರು ಸಂಪೂರ್ಣ ಸುಟ್ಟಿದೆ’ ಎಂದೂ ತಿಳಿಸಿದರು.

ADVERTISEMENT

‘ಕಾರಿಗೆ ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುದು ಗೊತ್ತಾಗಿಲ್ಲ. ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.