ADVERTISEMENT

ಡಿ.ಜೆ.ಹಳ್ಳಿ ಗಲಭೆ ಪ್ರಕರಣ| ಮಾಜಿ ಮೇಯರ್‌ ಸಂಪತ್‌ರಾಜ್‌ಗೆ ಸಿಸಿಬಿ ನೋಟಿಸ್

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2020, 11:36 IST
Last Updated 17 ಸೆಪ್ಟೆಂಬರ್ 2020, 11:36 IST
ಸಂಪತ್‌ ರಾಜ್‌
ಸಂಪತ್‌ ರಾಜ್‌   

ಬೆಂಗಳೂರು: ಡಿ.ಜೆ.ಹಳ್ಳಿ ಗಲಭೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಮಾಜಿ ಮೇಯರ್‌ಸಂಪತ್ ರಾಜ್ ಅವರಿಗೆ ಸಿಸಿಬಿ ನೋಟಿಸ್ ನೀಡಿದೆ.

ಈ ಹಿಂದೆಯೂ ಸಂಪತ್ ರಾಜ್ ಅವರು ಸಿಸಿಬಿ ವಿಚಾರಣೆ ಎದುರಿಸಿದ್ದರು. ಕೆಲ ಮಾಹಿತಿ ಕಲೆಹಾಕಿದ್ದ ಪೊಲೀಸರು, ಪುನಃ ವಿಚಾರಣೆಗೆ ಕರೆಸುವುದಾಗಿ ಹೇಳಿದ್ದರು. ಇದೀಗ ಎರಡನೇ ಬಾರಿ ನೋಟಿಸ್‌ ನೀಡಿದ್ದು, ಚಾಮರಾಜಪೇಟೆಯಲ್ಲಿರುವ ಕಚೇರಿಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಸಂಪತ್ ರಾಜ್ ಅವರ ಆಪ್ತ ಸಹಾಯಕ ಅರುಣ್‌ಕುಮಾರ್‌ನನ್ನು ಈಗಾಗಲೇ ಬಂಧಿಸಲಾಗಿದೆ. ಆತನ ಹೇಳಿಕೆ ಆಧರಿಸಿ ಸಂಪತ್ ರಾಜ್ ಅವರಿಗೆ ನೋಟಿಸ್‌ ನೀಡಿರುವುದಾಗಿ ಗೊತ್ತಾಗಿದೆ.

ADVERTISEMENT

‘ಶುಕ್ರವಾರ ಬೆಳಿಗ್ಗೆ ವಿಚಾರಣೆಗೆ ಹಾಜರಾಗುವಂತೆ ಸಂಪತ್ ರಾಜ್ ಅವರಿಗೆ ನೋಟಿಸ್ ನೀಡಲಾಗಿದೆ. ಸಿಸಿಬಿಯ ಹಿರಿಯ ಅಧಿಕಾರಿಗಳು ಹೇಳಿಕೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ’ ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.