ADVERTISEMENT

ವೇಶ್ಯಾವಾಟಿಕೆ ಜಾಲ ಭೇದಿಸಿದ ಸಿಸಿಬಿ ಪೊಲೀಸರು: ಇಬ್ಬರ ಬಂಧನ

ಹೊರರಾಜ್ಯದ ಯುವತಿಯರ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 29 ಜನವರಿ 2020, 5:46 IST
Last Updated 29 ಜನವರಿ 2020, 5:46 IST
   

ಬೆಂಗಳೂರು: ಉದ್ಯೋಗ ಕೊಡಿಸುವ ನೆಪದಲ್ಲಿ ಹೊರ ರಾಜ್ಯಗಳಿಂದ ಅಮಾಯಕ ಹೆಣ್ಣು ಮಕ್ಕಳನ್ನು ಕರೆದುಕೊಂಡು ಬಂದು ವೇಶ್ಯಾವಟಿಕೆಗೆ ದೂಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸುಬೇಂದ್ರ ದೇಬನಾಥ್ ಮತ್ತು ಪ್ರಜ್ವಲ್ ಬಂಧಿತರು. ಹೊರರಾಜ್ಯಗಳ ಇಬ್ಬರು ಯುವತಿಯರನ್ನು ರಕ್ಷಿಸಲಾಗಿದೆ.

ಆರೋಪಿಗಳು ಶ್ರೀರಾಮಪುರದಲ್ಲಿ ಮನೆಯೊಂದನ್ನು ಬಾಡಿಗೆ ಪಡೆದು ಅಲ್ಲಿ ಹೊರರಾಜ್ಯಗಳಿಂದ ಹೆಣ್ಣು ಮಕ್ಕಳನ್ನು ಮಾನವ ಕಳ್ಳಸಾಗಣೆ ಮಾಡಿಕೊಂಡು ಬಂದು ಗಿರಾಕಿಗಳಿಂದ ₹ 2,000ದಿಂದ 3,000 ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂದು ಸಿಬಿಐ ಪೊಲೀಸರು ತಿಳಿಸಿದರು.

ADVERTISEMENT

ವೇಶ್ಯಾವಟಿಕೆಗೆ ತಮ್ಮದೇ ಜಾಲ ರಚಿಸಿಕೊಂಡಿದ್ದ ಆರೋಪಿಗಳು, ಉದ್ಯೋಗ ಕೊಡಿಸುವ ಆಮಿಷ ಒಡ್ಡಿ ಯುವತಿಯರನ್ನು ನಗರಕ್ಕೆ ಕರೆದುಕೊಂಡು ಬರುತ್ತಿದ್ದರು. ನಂತರ, ತಾವೇ ಆಶ್ರಯ ನೀಡಿ, ಹೆಚ್ಚಿನ ಹಣದ ಆಸೆ ತೋರಿಸಿ ವೇಶ್ಯಾವಟಿಕೆ ನಡೆಸುವಂತೆ ಪ್ರಚೋದಿಸುತ್ತಿದ್ದರು ಎಂದೂ ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.