ಬೆಂಗಳೂರು: ಜಿಂಕೆ ಕೊಂಬುಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿ ಸುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಕೊಣಂದೂರಿನ ಸುಂದರೇಶ್ (30), ಅರಳಾಪುರ ಗ್ರಾಮದ ರಾಘವೇಂದ್ರ (23) ಹಾಗೂ ಬೆಂಗಳೂರು ಮುತ್ತ್ಯಾಲನಗರದ ಮಂಜು (46) ಬಂಧಿತರು. ಅವರಿಂದ ₹5 ಲಕ್ಷ ಮೌಲ್ಯದ್ದು ಎನ್ನಲಾದ ಎರಡು ಜಿಂಕೆಯ ಕೊಂಬುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
‘ಜಿಂಕೆ ಕೊಂಬುಗಳ ಸಮೇತ ನಗರಕ್ಕೆ ಬಂದಿದ್ದ ಆರೋಪಿಗಳು, ಆರ್.ಎಂ.ಸಿ ಯಾರ್ಡ್ ಠಾಣೆ ವ್ಯಾಪ್ತಿಯ ಪ್ರದೇಶವೊಂದರಲ್ಲಿ ನಿಂತಿದ್ದರು. ಗ್ರಾಹಕರಿಗಾಗಿ ಕಾಯುತ್ತಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಲಾಯಿತು’ ಎಂದು ಸಿಸಿಬಿ ಅಧಿಕಾರಿಯೊಬ್ಬರು ಹೇಳಿದರು.
‘3 ಮೊಬೈಲ್ ಹಾಗೂ ಇನ್ನೋವಾ ಕಾರನ್ನೂ ಜಪ್ತಿ ಮಾಡಲಾಗಿದೆ. ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದೂ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.