ADVERTISEMENT

ಸಿಡಿ ಬ್ಲ್ಯಾಕ್‌ಮೇಲ್: ವಿಚಾರಣೆಗೆ ಹಾಜರು

​ಪ್ರಜಾವಾಣಿ ವಾರ್ತೆ
Published 15 ಜೂನ್ 2021, 20:06 IST
Last Updated 15 ಜೂನ್ 2021, 20:06 IST

ಬೆಂಗಳೂರು: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ರೂಪಿಸಿ ಬ್ಲ್ಯಾಕ್‌ಮೇಲ್ ಮಾಡಿದ್ದ ಪ್ರಕರಣದ ಆರೋಪಿ ಶ್ರವಣ್, ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳ ಎದುರು ವಿಚಾರಣೆಗಾಗಿ ಮಂಗಳವಾರ ಹಾಜರಾದರು.

ಇನ್ನೊಬ್ಬ ಆರೋಪಿ ನರೇಶ್‌ ಗೌಡನನ್ನು ಸೋಮವಾರವಷ್ಟೇ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಅದರ ಬೆನ್ನಲ್ಲೇ ಶ್ರವಣ್‌ನನ್ನು ಮಂಗಳವಾರ ಮಧ್ಯಾಹ್ನದಿಂದ ಸಂಜೆಯವರೆಗೂ ವಿಚಾರಣೆ ನಡೆಸಿ ವಾಪಸು ಕಳುಹಿಸಿದರು.

‘ಪ್ರಕರಣ ಸಂಬಂಧ ಇಬ್ಬರ ಹೇಳಿಕೆ ಪಡೆದು ಪರಿಶೀಲಿಸಲಾಗುತ್ತಿದೆ. ಅಗತ್ಯವಿದ್ದರೆ ಪುನಃ ಅವರನ್ನು ವಿಚಾರಣೆಗೆ ಕರೆಸಲಾಗುವುದು’ ಎಂದು ಎಸ್‌ಐಟಿ ಮೂಲಗಳು ಹೇಳಿವೆ. ಬ್ಲ್ಯಾಕ್‌ಮೇಲ್ ಸಂಬಂಧ ರಮೇಶ ಜಾರಕಿಹೊಳಿ ಅವರು ಸದಾಶಿನಗರ ಠಾಣೆಗೆ ದೂರು ನೀಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.