
ಪ್ರಜಾವಾಣಿ ವಾರ್ತೆಬೆಂಗಳೂರು: ಸೆಂಟರ್ ಸ್ಟೇಜ್ ಸಂಸ್ಥೆಯು ರಂಗ ಸಂಘಟಕ ಶ್ರೀನಿವಾಸ ಕಪ್ಪಣ್ಣ ಅವರ ಹೆಸರಿನಲ್ಲಿ ನೀಡುವ 2026ನೇ ಸಾಲಿನ ಸೆಂಟರ್ ಸ್ಟೇಜ್–ಕಪ್ಪಣ್ಣ ಸಾಂಸ್ಕೃತಿಕ ಪ್ರಶಸ್ತಿಗೆ ಇಬ್ಬರನ್ನು ಆಯ್ಕೆ ಮಾಡಲಾಗಿದೆ.
ಶಿವಮೊಗ್ಗದ ನಟ, ನಿರ್ದೇಶಕ ಎಂ.ಗಣೇಶ್ ಅವರನ್ನು ಕಪ್ಪಣ್ಣ ಸಾಂಸ್ಕೃತಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ₹50 ಸಾವಿರ ನಗದು, ಪ್ರಶಸ್ತಿ ಫಲಕ ಒಳಗೊಂಡಿದೆ.
ವಿಜಯಪುರದ ಶಕೀಲ್ ಅಹಮದ್ ಅವರನ್ನು ಕಪ್ಪಣ್ಣ ಸಾಂಸ್ಕೃತಿಕ ಯುವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ₹25 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ.
ಫೆ.13ರ ಸಂಜೆ 6ಕ್ಕೆ ನಗರದ ನಯನ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸಂಸ್ಥೆ ಅಧ್ಯಕ್ಷ ಟಿ.ಎಸ್.ನಾಗಾಭರಣ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.