ಬೆಂಗಳೂರು: ‘ಕೇಂದ್ರ ಸರ್ಕಾರದ ಕೈಗಾರಿಕಾ ನ್ಯಾಯಮಂಡಳಿ ಹಾಗೂ ಕಾರ್ಮಿಕ ನ್ಯಾಯಾಲಯಕ್ಕೆ ಪೀಠಾಸೀನ ಅಧಿಕಾರಿಯನ್ನಾಗಿ ಎಚ್.ಜಿ.ನಾಗರತ್ನ ಅವರನ್ನು ನೇಮಕ ಮಾಡಲಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
ಈ ಕುರಿತಂತೆ ಕೈಗಾರಿಕಾ ಕಾನೂನು ವೃತ್ತಿನಿರತರ ವೇದಿಕೆ ಕಾರ್ಯದರ್ಶಿ ಕೆ.ಬಿ.ನಾರಾಯಣ ಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಕೇಂದ್ರದ ಪರ ಹಾಜರಾಗಿದ್ದ ವಕೀಲ ಎ.ವಿ.ನಿಶಾಂತ್, ‘ಇದೇ 18ರಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪೀಠಾಸೀನ ಅಧಿಕಾರಿಯನ್ನಾಗಿ ಎಚ್.ಜಿ.ನಾಗರತ್ನ ಅವರನ್ನು ನೇಮಕ ಮಾಡಲಾಗಿದೆ’ ಎಂದು ಆದೇಶವನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಅರ್ಜಿ ವಿಲೇವಾರಿ ಮಾಡಿ ಆದೇಶಿಸಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.