ADVERTISEMENT

ಮನೆ ಮುಂದೆ ನಿಂತಿದ್ದ ವೃದ್ಧೆ ಸರಗಳವು

​ಪ್ರಜಾವಾಣಿ ವಾರ್ತೆ
Published 3 ಜುಲೈ 2022, 16:05 IST
Last Updated 3 ಜುಲೈ 2022, 16:05 IST

ಬೆಂಗಳೂರು: ಮನೆ ಮುಂದೆ ನಿಂತಿದ್ದ ವೃದ್ಧೆಯ ಚಿನ್ನದ ಸರವನ್ನು ದುಷ್ಕರ್ಮಿಗಳು ಕಿತ್ತೊಯ್ದಿದ್ದು, ಈ ಬಗ್ಗೆ ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಶನಿವಾರ ಮಧ್ಯಾಹ್ನ ನಡೆದಿರುವ ಘಟನೆ ಸಂಬಂಧ ವೃದ್ಧೆ ಈರಮ್ಮ (84) ಹೇಳಿಕೆ ನೀಡಿದ್ದಾರೆ. ಅದರನ್ವಯ ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಆರ್‌ಪಿಸಿ ಬಡಾವಣೆಯ 8ನೇ ಮುಖ್ಯರಸ್ತೆ ನಿವಾಸಿ ಈರಮ್ಮ, ಮನೆ ಮುಂದೆ ನಿಂತಿದ್ದರು. ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು, ವಿಳಾಸ ಕೇಳುವ ನೆಪದಲ್ಲಿ ಮಾತನಾಡಿಸಿದ್ದರು. ವಿಳಾಸದ ಬಗ್ಗೆ ವೃದ್ಧೆ ತಿಳಿಸುತ್ತಿದ್ದಾಗಲೇ ಆರೋಪಿಗಳು, ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ’ ಎಂದೂ ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.