ADVERTISEMENT

‘ಬುದ್ಧಿ ಕಲಿಸಲು ಹೋಗಿ ಮಗನ ಕಳೆದುಕೊಂಡೆ’

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2022, 19:11 IST
Last Updated 8 ಏಪ್ರಿಲ್ 2022, 19:11 IST

ಬೆಂಗಳೂರು: ಚಾಮರಾಜಪೇಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಅರ್ಪಿತ್ (25) ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಮೃತ ತಂದೆ ಸುರೇಂದ್ರಕುಮಾರ್ ಅಲಿಯಾಸ್ ಬಾಬು (51) ಅವರ ವಿಚಾರಣೆ ನಡೆಸುತ್ತಿದ್ದಾರೆ.

ಏಪ್ರಿಲ್ 1ರಂದು ಅರ್ಪಿತ್ ಮೈ ಮೇಲೆ ಥಿನ್ನರ್ ಎರಚಿ ಬೆಂಕಿ ಹಚ್ಚಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಏಪ್ರಿಲ್ 7ರಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅರ್ಪಿತ್ ತೀರಿಕೊಂಡಿದ್ದರು.

‘ವಿಚಾರಣೆ ನಡೆಸಲಾಗುತ್ತಿದೆ. ಕೃತ್ಯದ ಬಗ್ಗೆ ಸುರೇಂದ್ರಕುಮಾರ್ಪಶ್ಚಾತ್ತಾಪ ಪಡುತ್ತಿದ್ದಾರೆ. ಮಗನ ನೆನೆದು ಕಣ್ಣೀರಿಡುತ್ತಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ADVERTISEMENT

ಮಾತು ಕೇಳದ ಮಗ: ‘ಮಗನನ್ನು ಪ್ರೀತಿಸುತ್ತಿದ್ದೆ. ತಪ್ಪು ಮಾಡಿದಾಗ ಬುದ್ಧಿ ಹೇಳುತ್ತಿದ್ದೆ. ಕೊಲೆ ಉದ್ದೇಶ ನನಗೆ ಇರಲಿಲ್ಲ. ಬುದ್ಧಿ ಕಲಿಸಲು ಹೋಗಿ ಮಗನನ್ನು ಕಳೆದುಕೊಂಡೆ’ ಎಂಬುದಾಗಿ ಸುರೇಂದ್ರಕುಮಾರ್ ಹೇಳಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.