ಬೆಂಗಳೂರು: ಹಲಸೂರಿನ ಕೇಂಬ್ರಿಜ್ ಬಡಾವಣೆಯಲ್ಲಿರುವ ಚರಣ್ ಬಿ.ಇಡಿ ಕಾಲೇಜಿನಲ್ಲಿ ಯಾವ ವಿದ್ಯಾರ್ಥಿಗಳೂ ಪ್ರವೇಶ ಪಡೆಯಬಾರದು ಎಂದು ಬೆಂಗಳೂರು ನಗರ ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.
‘ಈ ಕಾಲೇಜು ಎನ್ಸಿಟಿಇಯಿಂದ ಅನುಮೋದನೆ ಪಡೆದಿರುವುದಾಗಿ ಸುಳ್ಳು ಪ್ರಮಾಣ ಪತ್ರವನ್ನು ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದೆ. ಕಾಲೇಜಿನ ಸಂಯೋಜನೆಯನ್ನು ರದ್ದುಗೊಳಿಸುವಂತೆ ವಿವಿಧ ಪ್ರಾಧಿಕಾರಗಳಿಗೆ ಶಿಫಾರಸು ಮಾಡಲಾಗಿದ್ದು, ಸರ್ಕಾರದ ಗಮನಕ್ಕೂ ತರಲಾಗಿದೆ’ ಎಂದು ವಿಶ್ವವಿದ್ಯಾಲಯದ ಕುಲಪತಿ ಹೇಳಿದ್ದಾರೆ.
‘ಈ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳನ್ನು ವಿಶ್ವವಿದ್ಯಾಲಯದಲ್ಲಿ ಸಂಯೋಜನೆಗೊಂಡಿರುವ ಇತರೆ ಐದು ಕಾಲೇಜುಗಳಿಗೆ ವರ್ಗಾವಣೆ ಮಾಡಲು ಸೂಚಿಸಲಾಗಿದೆ’ ಎಂದೂ ಅವರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.