ADVERTISEMENT

ವೈರಸ್‌ಗಳ ವಿರುದ್ಧ ಹೋರಾಟ ಅನಿವಾರ್ಯ: ಮೇಜರ್ ಜನರಲ್ ಜಿ.ಡಿ.ಬಕ್ಷಿ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2020, 4:33 IST
Last Updated 7 ಮಾರ್ಚ್ 2020, 4:33 IST
ಸಮಾರಂಭದಲ್ಲಿ ನಿವೃತ್ತ ಮೇಜರ್ ಜನರಲ್ ಜಿ.ಡಿ. ಬಕ್ಷಿ ಅವರನ್ನು ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಸನ್ಮಾನಿಸಿದರು. ಸಂಸ್ಥೆಯ ಪದಾಧಿಕಾರಿಗಳು ಇದ್ದಾರೆ
ಸಮಾರಂಭದಲ್ಲಿ ನಿವೃತ್ತ ಮೇಜರ್ ಜನರಲ್ ಜಿ.ಡಿ. ಬಕ್ಷಿ ಅವರನ್ನು ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಸನ್ಮಾನಿಸಿದರು. ಸಂಸ್ಥೆಯ ಪದಾಧಿಕಾರಿಗಳು ಇದ್ದಾರೆ   

ಬೆಂಗಳೂರು: ‘ಈವರೆಗೂ ಯುದ್ಧ ಅಥವಾ ಹೋರಾಟಗಳ ಮೂಲಕ ದೇಶ ರಕ್ಷಣೆ ಕಾರ್ಯ ನಡೆಯಿತು. ಈಗ ವೈರಸ್‌ಗಳ ವಿರುದ್ಧ ಹೋರಾಟ ಮಾಡಬೇಕಾಗಿದೆ. ಕೋವಿಡ್‌–19 ವೈರಸ್‌ನಿಂದ ರಕ್ಷಿಸಿಕೊಳ್ಳಲು ಹೋರಾಟ ಮಾಡಬೇಕು’ ಎಂದು ನಿವೃತ್ತ ಮೇಜರ್‌ ಜನರಲ್‌ ಜಿ.ಡಿ. ಬಕ್ಷಿ ಹೇಳಿದರು.

ನಗರದಲ್ಲಿ ಶುಕ್ರವಾರ ರಾಜ್ಯ ಲೆಕ್ಕಪರಿಶೋಧಕರ ಸಂಸ್ಥೆಯ 32ನೇ ವಾರ್ಷಿಕೋತ್ಸವದಲ್ಲಿ ಮಾತನಾಡಿದ ಅವರು, ‘ಸೇನೆಗೆ ಸೇರುವುದು ಪೂರ್ವಜನ್ಮದ ಪುಣ್ಯ. ಭಾರತ ಮಾತೆಯನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗುವುದು ಒಂದು ಸುವರ್ಣಾವಕಾಶ’ ಎಂದರು.

ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ‘1957ರಲ್ಲಿ ಕರ್ನಾಟಕದಲ್ಲಿ ಆರಂಭಗೊಂಡ ಈ ಸಂಸ್ಥೆ 64 ವರ್ಷಗಳನ್ನು ಪೂರ್ಣಗೊಳಿಸಿದೆ. ಸಂಸ್ಥೆಯು ನಿರಂತರವಾಗಿ ವಿಚಾರ ಸಂಕಿರಣಗಳು, ಲೆಕ್ಕಪರಿಶೋಧಕರಿಗೆ ಉಪನ್ಯಾಸ ಹಾಗೂ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.