
ಪ್ರಜಾವಾಣಿ ವಾರ್ತೆ
ಬೆಂಗಳೂರು: ಚಾಮರಾಜಪೇಟೆಯ ಅವಿಚ್ಛಿನ್ನ ಪರಂಪರಾ ಕೂಡ್ಲಿ ಶೃಂಗೇರಿ ಮಠದ ನೂತನ ಪೀಠಾಧಿಪತಿ ವಿದ್ಯಾವಿಶ್ವೇಶ್ವರ ಭಾರತೀ ಸ್ವಾಮೀಜಿ ಅವರಚಾತುರ್ಮಾಸ್ಯ ಜುಲೈ 24ರಂದು ಮಠದಲ್ಲಿ ನಡೆಯಲಿದೆ.
ಆಷಾಢ ಮಾಸದ ಹುಣ್ಣಿಮೆಯಂದು ಚಾತುರ್ಮಾಸ್ಯ ವ್ರತ ಆರಂಭಿಸಲಿದ್ದಾರೆ. ಭಾದ್ರಪದ ಮಾಸದ ಸೆಪ್ಟೆಂಬರ್ ತಿಂಗಳ ಹುಣ್ಣಿಮೆ ದಿನದಂದು ಸೀಮೊಲ್ಲಂಘನ ಮಾಡುವ ಮೂಲಕ ವ್ರತ ಮುಕ್ತಾಯಗೊಳಿಸಲಿದ್ದಾರೆ.
ಚಾತುರ್ಮಾಸ್ಯದ ಅವಧಿಯಲ್ಲಿ ಭಕ್ತರಿಗೆ ಸ್ವಾಮೀಜಿ ಮಠದಲ್ಲಿ ದರ್ಶನ ನೀಡಲಿದ್ದಾರೆ. ವ್ರತಾಚರಣೆ ವೇಳೆ ವಿವಿಧ ಧಾರ್ಮಿಕ, ಪ್ರವಚನಾದಿ ಕೈಂಕರ್ಯಗಳು ನಡೆಯಲಿವೆ. ಭಕ್ತಾದಿಗಳು ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.